ಪ್ರಜಾಸ್ತ್ರ ಸುದ್ದಿ
ಶ್ರೀರಂಗಪಟ್ಟಣ: ವಿದ್ಯಾರ್ಥಿಗಳಿಗೆ ಒಳ್ಳೆಯ ಸಂಸ್ಕಾರ ಕಲಿಸಬೇಕಾದ ಶಿಕ್ಷಕರೆ ಅದೇಕೋ ಹಾದಿ ತಪ್ಪುತ್ತಿರುವುದು ನಿಜಕ್ಕೂ ಆಘಾತಕಾರಿ ಸಂಗತಿ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಕಟ್ಟೇರಿ ಗ್ರಾಮದಲ್ಲಿರುವ ವಸತಿ ನಿಲಯದ ವಿದ್ಯಾರ್ಥಿನಿ ಜೊತೆಗೆ ಮುಖ್ಯ ಶಿಕ್ಷಕ ಅಸಭ್ಯವಾಗಿ ನಡೆದುಕೊಂಡಿದ್ದಾನೆ. ಇದರಿಂದ ರೊಚ್ಚಿಗೆದ್ದ ವಿದ್ಯಾರ್ಥಿನಿಯರು ದೊಣ್ಣೆಯಿಂದ ಥಳಿಸಿದ್ದಾರೆ.
ಮುಖ್ಯ ಶಿಕ್ಷಕ ಚಿನ್ಮಯಾನಂದ ಮೂರ್ತಿಗೆ ವಿದ್ಯಾರ್ಥಿನಿಯರು ಕೋಲು, ದೊಣ್ಣೆಯಿಂದ ಥಳಿಸಿದ್ದಾರೆ. ನಂತರ ಕೆ.ಆರ್.ಎಸ್ ಠಾಣೆ ಪೊಲೀಸರು ಸ್ಥಳಕ್ಕೆ ಬಂದು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಕಳೆದ ರಾತ್ರಿ ಈ ಘಟನೆ ನಡೆದಿದ್ದು, ವಿಡಿಯೋ ವೈರಲ್ ಆಗಿದೆ.