ಪ್ರಜಾಸ್ತ್ರ ಸುದ್ದಿ
ಹಾಸನ: ಕೊರಿಯರ್ ಅಂಗಡಿಯಲ್ಲಿ ಅನುಮಾನಸ್ಪದ ರೀತಿಯಲ್ಲಿ ಮಿಕ್ಸರ್ ಸ್ಫೋಟಗೊಂಡ ಘಟನೆ ಕುವೆಂಪುನಗರದಲ್ಲಿ ನಡೆದಿದೆ. ಈ ವೇಳೆ ಅಂಗಡಿಯಲ್ಲಿದ್ದ ಶಶಿ ಎಂಬುವರಿಗೆ ಗಾಯಗಳಾಗಿವೆ.
ಗಾಯಾಳು ಶಶಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಿಕ್ಸರ್ ಸ್ಫೋಟದ ತೀವ್ರತೆಗೆ ಅಂಗಡಿಯ ಗ್ಲಾಸ್ ಗಳು ಸೇರಿದಂತೆ ಇತರೆ ವಸ್ತುಗಳಿಗೆ ಹಾನಿಯಾಗಿದೆ. ಹಾಸನ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಂಗಳೂರಲ್ಲಿ ಆಟೋದಲ್ಲಿ ಹೋಗುವಾಗ ಕುಕ್ಕರ್ ಸ್ಫೋಟಗೊಂಡ ಪ್ರಕರಣದ ತನಿಖೆ ನಡೆಯುತ್ತಿದೆ. ಈ ಘಟನೆಯಲ್ಲಿ ಶಂಕಿತ ಉಗ್ರ ಶಾರೀಕ್ ಸಿಕ್ಕಿಬಿದ್ದಿದ್ದಾನೆ. ಇದೀಗ ಮಿಕ್ಸರ್ ಸ್ಫೋಟ ಜನರಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ.