ಪ್ರಜಾಸ್ತ್ರ ಸುದ್ದಿ
ಧಾರವಾಡ: ಬಿಜೆಪಿ ಸಂಸದೀಯ ಮಂಡಳಿ ಹಾಗೂ ಕೇಂದ್ರ ಚುನಾವಣಾ ಸಮಿತಿ ಸದಸ್ಯರಾಗಿ ನೇಮಕಗೊಂಡಿರುವ ಮಾಜಿ ಸಿಎಂ ಯಡಿಯೂರಪ್ಪನವರನ್ನು ಧಾರವಾಡ ಶಾಸಕ ಅಮೃತ ದೇಸಾಯಿಯವರು ಅಭಿನಂದನೆ ಸಲ್ಲಿಸಿದ್ದಾರೆ.
ಬೆಂಗಳೂರಿನ ಬಿಎಸ್ವೈ ಅವರ ಅಧಿಕೃತ ನಿವಾಸ ಕಾವೇರಿಗೆ ಬುಧವಾರ ರಾತ್ರಿ ಭೇಟಿನೀಡಿದ ಶಾಸಕ ಅಮೃತ ದೇಸಾಯಿ ಹಾಗೂ ಧಾರವಾಡ ಜಿಲ್ಲೆಯ ಬಿಜೆಪಿ ಮುಖಂಡರು ಅವರನ್ನು ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು.
ತಾವು ಕೂಡಾ ಆದಷ್ಟು ಬೇಗ ಧಾರವಾಡ ಜಿಲ್ಲೆಯ ಪ್ರವಾಸ ಕೈಗೊಳ್ಳುವುದಾಗಿ ಬಿ.ಎಸ್.ಯಡಿಯೂರಪ್ಪ, ಶಾಸಕ ಅಮೃತ ದೇಸಾಯಿಯವರಿಗೆ ಭರವಸೆ ನೀಡಿದ್ದಾರೆ. ಈ ವೇಳೆ ಸಚಿವರಾದ ಸಿ.ಸಿ.ಪಾಟೀಲ ಹಾಗೂ ಬಿ.ವೈ.ವಿಜಯೇಂದ್ರ ಉಪಸ್ಥಿತರಿದ್ದರು.