ಶಾಸಕಿ ಪತಿ ಟಾರ್ಗೆಟ್ ಮಾಡಿದ ಸರ್ಕಾರ!

846

ಬೆಂಗಳೂರು: ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಪತಿಯನ್ನ ಸರ್ಕಾರ ಟಾರ್ಗೆಟ್ ಮಾಡಿದೆ ಅಂತಾ ಹೇಳಲಾಗ್ತಿದೆ. ಶಾಸಕಿ ರಾಜೀನಾಮೆ ನೀಡಲು ಮುಂದಾಗಿದ್ದು, ಇದ್ರಿಂದ ಹಿಂದೆ ಸರಿಯಲು ಕೈ ನಾಯಕರು ಹೇಳಿದ್ದಾರೆ. ಆದ್ರೆ, ಶಾಸಕಿ ಅಂಜಲಿ ನಿಂಬಾಳ್ಕರ್ ಹಿಂದೆ ಸರಿಯದ ಕಾರಣ ಅವರ ಪತಿ ಐಪಿಎಸ್ ಅಧಿಕಾರಿ ಹೇಮಂತ ನಿಂಬಾಳ್ಕರ್ ಅವರನ್ನ ಟಾರ್ಗೆಟ್ ಮಾಡಿದೆ ಎನ್ನಲಾಗ್ತಿದೆ.

ಆರ್ಥಿಕ ಅಪರಾಧಿಗಳ ವಿಭಾಗದ ಪೊಲೀಸ್ ಮಹಾನಿರೀಕ್ಷಕರಾಗಿದ್ದ ಹೇಮಂತ ನಿಂಬಾಳ್ಕರ್ ಅವರನ್ನ ತಕ್ಷಣ ಜಾರಿಗೆ ಬರುವಂತೆ ಭ್ರಷ್ಟಾಚಾರ ನಿಗ್ರಹ ದಳದ ಐಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಭ್ರಷ್ಟಾಚಾರ ನಿಗ್ರಹ ದಳದ ಐಜಿಪಿಯಾಗಿದ್ದ ಎಂ.ಚಂದ್ರಶೇಖರ ಅವರನ್ನ ಸಿಐಡಿ ಆರ್ಥಿಕ ಅಪರಾಧಗಳ ವಿಭಾಗದ ಪೊಲೀಸ್ ಮಹಾನಿರೀಕ್ಷಕರಾಗಿ ವರ್ಗಾವಣೆ ಮಾಡಲಾಗಿದೆ.

ರಾಜೀನಾಮೆಯಿಂದ ಹಿಂದೆ ಸರಿಯದಿರಲು ನಿರ್ಧರಿಸುವ ಕಾರಣ, ನನ್ನ ಪತಿಯನ್ನ ಟಾರ್ಗೆಟ್ ಮಾಡಲಾಗ್ತಿದೆ ಅಂತಾ ಶಾಸಕಿ ಅಂಜಲಿ ನಿಂಬಾಳ್ಕರ್ ಆತಂಕ ವ್ಯಕ್ತಪಡಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!