ಸಚಿವನಾಗಲು ಯಾರದೋ ತಲೆ ಹಿಡಿಯುವ ಕೆಲಸ ಮಾಡಿಲ್ಲ: ಯತ್ನಾಳ

277

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಬಿ.ಎಸ್ ಯಡಿಯೂರಪ್ಪ ಹೆಚ್ಚು ದಿನ ಮುಖ್ಯಮಂತ್ರಿಯಾಗಿ ಉಳಿಯುವುದಿಲ್ಲ. ಉತ್ತರ ಕರ್ನಾಟಕದವರು ಸಿಎಂ ಆಗ್ತಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ರು. ಇದಕ್ಕೆ ಸಚಿವ ಆರ್.ಅಶೋಕ ತಿರುಗೇಟು ನೀಡಿ, ಸಿಎಂ ಸೀಟ್ ಖಾಲಿ ಇಲ್ಲ. ಹಗಲುಗನಸು ಕಾಣೋದು ನಿಲ್ಲಿಸಬೇಕು ಎಂದಿದ್ರು.

ಸಚಿವ ಆರ್.ಅಶೋಕ ಮಾತಿಗೆ ಟ್ವೀಟರ್ ನಲ್ಲಿ ಪರೋಕ್ಷವಾಗಿ ಶಾಸಕ ಯತ್ನಾಳ ಟಾಂಟ್ ಕೊಟ್ಟಿದ್ದಾರೆ. ಕರ್ನಾಟಕದ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಆತ್ಮಸಾಕ್ಷಿಯಾಗಿ ಜನಪ್ರತಿನಿಧಿಯಾಗಿ ಕೆಲಸ ಮಾಡುತ್ತಿದ್ದೇನೆ ಹೊರತು, ಸಚಿವನಾಗುವುದಕ್ಕೆ ಕಾಲು ಹಿಡಿದು ತಲೆ ಹಿಡಿಯುವ ಕೆಲಸ ಮಾಡಿಲ್ಲ. ಅದು ನನ್ನ ಜಾಯಮಾನ ಅಲ್ಲ ಎಂದು ಭರ್ಜರಿಯಾಗಿ ವಾಗ್ದಾಳಿ ನಡೆಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!