ಸ್ವಪಕ್ಷದ ನಾಯಕರಿಗೆ ಯತ್ನಾಳ ಎಚ್ಚರಿಕೆ

341

ಕಾರವಾರ: ಸಿಎಂ ಬಿ.ಎಸ್ ಯಡಿಯೂರಪ್ಪನವರಿಗೆ ಸ್ವಪಕ್ಷದವರು ಹಾಗೂ ಹೈಕಮಾಂಡ್ ತೊಂದ್ರೆ ಕೊಟ್ಟರೆ, ಮಹಾರಾಷ್ಟ್ರದ ಪರಿಸ್ಥಿತಿ ಬರುತ್ತೆ ಅಂತಾ ಶಾಸಕ ಬಸನಗೌಡ ಪಾಟೀಲ ಯತ್ನಾಳ ಎಚ್ಚರಿಸಿದ್ದಾರೆ. ಕಾರವಾರದಲ್ಲಿ ಮಾತ್ನಾಡಿದ ಅವರು, ಸ್ವಪಕ್ಷ ವಿರೋಧಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಉಪ ಚುನಾವಣೆ ಫಲಿತಾಂಶದ ಬಳಿಕ ಬಿಎಸ್ವೈ ರಾಜ್ಯದ ಜನನಾಯಕ ಅನ್ನೋದು ಸಾಬೀತಾಗಿದೆ. ಇದನ್ನ ಕೇಂದ್ರ ಸರ್ಕಾರ ಗಮನಿಸಬೇಕು. ಅಲ್ದೇ, ಅವರಿಗೆ ಸ್ವಾತಂತ್ರ್ಯ ನೀಡಬೇಕು. ಆಡಳಿತದಲ್ಲಿ ಹೆಚ್ಚು ಹಸ್ತಕ್ಷೇಪ ಮಾಡಬಾರದು ಅಂತಾ ರಾಜ್ಯ ಹಾಗೂ ಕೇಂದ್ರ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ. ಅಲ್ದೇ, ನಾನು ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಿಲ್ಲ. ಮಾಡುವುದಿಲ್ಲ. ಮಂತ್ರಿಗಿರಿ ನೀಡಲೇಬೇಕೆಂದು ಪಟ್ಟು ಹಿಡಿದಲ್ಲ ಅಂತಾ ಸ್ಪಷ್ಟಪಡಿಸಿದ್ರು.




Leave a Reply

Your email address will not be published. Required fields are marked *

error: Content is protected !!