ಶಾಸಕ ಡಾ.ರಾಜಾ ವೆಂಕಟಪ್ಪ ನಾಯಕರಿಗೆ ಸಚಿವ ಸ್ಥಾನ ನೀಡಲು ಆಗ್ರಹ

92

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕರ್ನಾಟಕ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದ ಜನರು ಬಹುಮತದಿಂದ ಆರಿಸಿ ತಂದಿದ್ದು, ಸುರಪುರ ಮತಕ್ಷೇತ್ರದಿಂದ 4 ಬಾರಿ ಆಯ್ಕೆಯಾದ ಸರ್ವ ಸಮುದಾಯದ ಶಾಸಕರಾದ ಡಾ.ರಾಜಾ ವೆಂಕಟಪ್ಪ ನಾಯಕ ಅವರಿಗೆ ಸಂಪುಟ ದರ್ಜೆಯ ಸಚಿವ ಸ್ಥಾನ ನೀಡಬೇಕೆಂದು  ಪ್ರದೇಶ ಕಾಂಗ್ರೆಸ್ ಪಕ್ಷದ ಒಬಿಸಿ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಂಡಾರೆಪ್ಪ ನಾಟೀಕಾರ  ಆಗ್ರಹಿಸಿದ್ದಾರೆ.

ಯಾದಗಿರಿ ಜಿಲ್ಲೆಯ ಸಮಗ್ರ ಅಭಿವೃದ್ಧಿ ಮತ್ತು ಸೌಹಾರ್ದತೆಗಾಗಿ  ಕಾಂಗ್ರೆಸ್ ಪಕ್ಷದ ಕೊಡುಗೆ ಮಹತ್ವದಾಗಿದೆ. ಶಾಸಕ ರಾಜಾ ವೆಂಕಟಪ್ಪ ನಾಯಕರವರು ತಂದೆವರ ದಾರಿಯಲ್ಲಿ ಮುನ್ನಡೆಯುತ್ತಿದ್ದು, ಕ್ಷೇತ್ರದ ಅಭಿವೃದ್ಧಿ ಮತ್ತು ಸುರಪುರ ಪ್ರಗತಿಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಗರಡಿಯಲ್ಲಿ ಪಳಗಿರುವ ಇವರು ಅವರಿಂದ ಬಹಳಷ್ಟು ಕಲಿತಿರುವ  ಸುರಪುರದ ಜನತೆ ನಾಲ್ಕನೇ ಬಾರಿ ಬಹುಮತದೊಂದಿಗೆ ವಿಧಾನಸಭೆಗೆ ಕಳುಹಿಸಿದ್ದಾರೆ. ಯಾದಗಿರಿ ಜಿಲ್ಲೆಯ ಹಿರಿಯ ನಾಯಕರಾದ ಶಾಸಕ ಡಾ.ರಾಜಾ ವೆಂಕಟಪ್ಪ ನಾಯಕರಿಗೆ ಸಂಪುಟ ದರ್ಜೆಯ ಸಚಿವ ಸ್ಥಾನ ನೀಡಬೇಕೆಂದು ಭಂಡಾರಪ್ಪ ನಾಟೀಕಾರ ಒತ್ತಾಯಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!