ಮನಗೂಳಿ ನಿಧನ: ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆಗೆ ರಾಜ್ಯಪಾಲರ ಆದೇಶ

617

ಪ್ರಜಾಸ್ತ್ರ ಬ್ರೇಕಿಂಗ್ ನ್ಯೂಸ್

ಬೆಂಗಳೂರು: ಮಾಜಿ ಸಚಿವ ಹಾಗೂ ಜೆಡಿಎಸ್ ಹಾಲಿ ಶಾಸಕ ಎಂ.ಸಿ ಮನಗೂಳಿ ಅವರು ಉಸಿರಾಟದ ತೊಂದರೆಯಿಂದಾಗಿ ನಿಧನರಾಗಿದ್ದಾರೆ. ಕಳೆದ 15 ದಿನಗಳಿಂದ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಬುಧವರ ತಡರಾತ್ರಿ ನಿಧನರಾಗಿದ್ದಾರೆ.

ಮನಗೂಳಿ ಅವರ ಅಂತ್ಯಕ್ರಿಯೆಯನ್ನ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲು ರಾಜ್ಯಪಾಲರು ಆದೇಶಿಸಿದ್ದಾರೆ. ಅಲ್ದೇ, ಕೋವಿಡ್ ಮಾರ್ಗಸೂಚಿಗಳನ್ನ ಅನುಸರಿಸಿ ಅಂತಿಮ ವಿಧಿ ವಿಧಾನ ನೆರವೇರಿಸಲು ಆದೇಶಿಸಿದ್ದು, ಈ ಸಂಬಂಧ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.




Leave a Reply

Your email address will not be published. Required fields are marked *

error: Content is protected !!