ಪ್ರಜಾಸ್ತ್ರ ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಜೆಡಿಎಸ್ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಎಂ.ಸಿ ಮನಗೂಳಿ ಅವರು ನಿಧನಕ್ಕೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿದ್ದಾರೆ. ಟ್ವೀಟರ್ ಮೂಲಕ ಅಗಲಿದ ಪಕ್ಷದ ಹಿರಿಯ ನಾಯಕನಿಗೆ ಅಂತಿಮ ನಮನ ಸಲ್ಲಿಸಿದ್ದಾರೆ. ಇನ್ನು ನಾಳೆ ಸ್ವತಃ ಕುಮಾರಸ್ವಾಮಿಯವರು ಸಿಂದಗಿಗೆ ಆಗಮಿಸಿ ಅಂತ್ಯಕ್ರಿಯೆ ವೇಳೆ ಭಾಗವಹಿಸಲಿದ್ದಾರೆ ಎಂದು ಅವರ ಆಪ್ತರು ‘ಪ್ರಜಾಸ್ತ್ರ’ಕ್ಕೆ ತಿಳಿಸಿದ್ದಾರೆ.