ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಸಿಎಂ ಸ್ಥಾನಕ್ಕೆ ಬಿ.ಎಸ್ ಯಡಿಯೂರಪ್ಪ ಸೋಮವಾರ ರಾಜೀನಾಮೆ ಸಲ್ಲಿಸಿದ್ದು, ಸಾಕಷ್ಟು ರಾಜಕೀಯ ಬೆಳವಣಿಗೆಗಳು ನಡೆದಿವೆ. ಈ ಬಗ್ಗೆ ಮಾತ್ನಾಡಿರುವ ಯಡಿಯೂರಪ್ಪ ಆಪ್ತ, ಅವರ ರಾಜಕೀಯ ಕಾರ್ಯದರ್ಶಿಯಾಗಿದ್ದ ಶಾಸಕ ಎಂ.ಪಿ ರೇಣುಕಾಚಾರ್ಯ ಮಾತ್ನಾಡಿದ್ದು, ಯಡಿಯೂರಪ್ಪನವರು ಸೂಚಿಸಿದಂತೆ ನಾವು ನಡೆದುಕೊಳ್ಳುತ್ತೇವೆ ಎಂದರು.
ಬಿಎಸ್ವೈ ಭೇಟಿಗೂ ಮೊದ್ಲು ಮಾತ್ನಾಡಿದ ಅವರು, ನಾನು ಸಚಿವ ಸ್ಥಾನಕ್ಕೆ ಲಾಬಿ ನಡೆಸುವುದಿಲ್ಲ. ನಾಯಕರು ಅವಕಾಶ ನೀಡಿದ್ರೆ ನಿಭಾಯಿಸುತ್ತೇನೆ. ಹೈಕಮಾಂಡ್ ಏನು ನಿರ್ಧಾರ ಮಾಡುತ್ತೆ ನೋಡೋಣ. ಮುಂದಿನ ಸಿಎಂಗೆ ಬೆಂಬಲ ನೀಡುವಂತೆ ಯಡಿಯೂರಪ್ಪನವರು ಸೂಚಿಸಿದ್ದಾರೆ. ಅದರಂತೆ ನಡೆದುಕೊಳ್ಳುತ್ತೇವೆ ಎಂದರು.