ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ನಗರ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಗೆಲ್ಲುವ ಮೂಲಕ ಹ್ಯಾಟ್ರಿಕ್ ಸಾಧಿಸಿದ್ದಾರೆ. ಈ ಖುಷಿಯಲ್ಲಿರುವ ನೂತನ ಶಾಸಕರಿಗೆ ಹೈಕೋರ್ಟ್ ಶಾಕ್ ಕೊಟ್ಟಿದೆ.
ಹೌದು, 2018ರಲ್ಲಿ ನಡೆದ ನಕಲಿ ವೋಟರ್ ಐಡಿ ಪ್ರಕರಣ ಸಂಬಂಧ, ಪೊಲೀಸ್ ತನಿಖೆಯ ಪರಿಶೀಲನಾ ವರದಿ ಸಲ್ಲಿಸಲು ಹಿರಿಯ ಐಪಿಎಸ್ ಅಧಿಕಾರಿಯೊಬ್ಬರನ್ನ ನೇಮಕ ಮಾಡುವಂತೆ ಹೈಕೋರ್ಟ್ ಸೂಚಿಸಿದೆ. ಈ ಪ್ರಕರಣದಲ್ಲಿ ಪೊಲೀಸರು ಸರಿಯಾದ ಕ್ರಮ ವಹಿಸಿಲ್ಲವೆಂದು ಜಿ.ಸಂತೋಷಕುಮಾರ ಹಾಗೂ ಎನ್.ಆನಂದ ಎಂಬುವರ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ ತನಿಖೆಯ ಪರಿಶೀಲನೆಗೆ ಹಿರಿಯ ಐಪಿಎಸ್ ಅಧಿಕಾರಿ ನೇಮಕ್ಕೆ ಸೂಚಿಸಲಾಗಿದೆ.
ಡಿಸೆಂಬರ್ 15ರೊಳಗೆ ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಬೇಕೆಂದು ನ್ಯಾಯಮೂರ್ತಿ ಎ.ಎಸ್ ಓಕ್ ನೇತೃತ್ವದ ವಿಭಾಗೀಯ ಪೀಠ ಸೂಚಿಸಿದೆ. ಹೀಗಾಗಿ ಈ ಪ್ರಕರಣದ ಮುಂದಿನ ವಿಚಾರಣೆಯನ್ನ ಡಿಸೆಂಬರ್ 18ಕ್ಕೆ ನಿಗದಿ ಮಾಡಲಾಗಿದೆ.