ಪ್ರಜಾಸ್ತ್ರ ಸುದ್ದಿ
ಮೈಸೂರು: ಬಿಎಸ್ಪಿ ಉಚ್ಛಾಟಿತ ಶಾಸಕ ಎನ್.ಮಹೇಶ, ನನ್ಗೆ ಸಚಿವ ಸ್ಥಾನ ಸಿಗದಿದ್ರೂ ಬಿಜೆಪಿಗೆ ಬೆಂಬಲ ಸೂಚಿಸುತ್ತೇನೆ ಎಂದು ಹೇಳಿದ್ದಾರೆ. ನಾನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ಜೊತೆ ಇರುತ್ತೇನೆ ಎಂದಿದ್ದಾರೆ.
ಸುತ್ತೂರಿನಲ್ಲಿ ನಡೆದ ಶಿವರಾತೇಶ್ವರ ಶಿವಯೋಗಿಗಳ ಜಯಂತಿ ಕಾರ್ಯಕ್ರಮದಲ್ಲಿ ಸಿಎಂ ಜೊತೆ ಭಾಗವಹಿಸಿದ್ರು. ಈ ವೇಳೆ ಮಾತ್ನಾಡಿದ ಅವರು, ಸಚಿವ ಸ್ಥಾನದ ಆಕಾಂಕ್ಷೆ ಯಾರಿಗೆ ಇರಲ್ಲ ಹೇಳಿ. ನನ್ಗೆ ಸಚಿವ ಸ್ಥಾನ ಕೊಟ್ಟರೆ ಅಭಿವೃದ್ಧಿ ಕೆಲಸ ಮಾಡುತ್ತೇನೆ ಎಂದು ಶಾಸಕ ಎನ್ ಮಹೇಶ ಹೇಳಿದ್ದಾರೆ.