‘ಮೊದಲ ಬಾರಿ ಗೆದ್ದ ಶಾಸಕರಿಗೆ ಓರಿಯಂಟೇಶನ್ ಮಾಡಬೇಕು’

167

ಪ್ರಜಾಸ್ತ್ರ ಸುದ್ದಿ

ಮೈಸೂರು: ಕಾಂಗ್ರೆಸ್ ಸರ್ಕಾರ ರಚನೆಯಾದ ದಿನದಿಂದ ಕೈ ನಾಯಕರ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಚಿಕ್ಕಬಳ್ಳಾಪುರದ ನೂತನ ಶಾಸಕ ಪ್ರದೀಪ್ ಈಶ್ವರ ಸವಾಲು ಹಾಕಿದ್ದರು. ಇದಕ್ಕೆ ಪ್ರತ್ಯುತ್ತರ ನೀಡಿರುವ ಸಂಸದರು, ಮೊದಲ ಬಾರಿ ಗೆದ್ದ ಶಾಸಕರಿಗೆ ಓರಿಯಂಟೇಶನ್ ಕಾರ್ಯಕ್ರಮ ಮಾಡಬೇಕು. ಸಾರ್ವಜನಿಕ ಜೀವನದಲ್ಲಿ ಹೇಗೆ ಮಾತನಾಡಬೇಕು ಎಂದು ತಿಳಿದುಕೊಳ್ಳಿ ಅಂತಾ ಹೇಳಿದರು.

ಸಿಎಂ ಸಿದ್ದರಾಮಯ್ಯನವರಿಗೆ 40 ವರ್ಷ ರಾಜಕೀಯ ಅನುಭವ ಇದೆ. ಹಿರಿಯ ಶಾಸಕರು, ಮೊದಲ ಗೆದ್ದ ಶಾಸಕರಿಗೆ ಓರಿಯಂಟೇಶನ್ ತೆಗೆದುಕೊಳ್ಳಲಿ ಎಂದರು. ನಿನ್ನೆ ಚಿಕ್ಕಬಳ್ಳಾಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್, ಬಡವರಿಗೆ ಅಕ್ಕಿ ನೀಡದ, ಕಣ್ಣೀರು ಒರೆಸದ ಬಿಜೆಪಿಯಿಂದ ಏನು ಅಭಿವೃದ್ಧಿ ಸಾಧ್ಯ. ಸಂಸದಾರದ ಪ್ರತಾಪ್ ಸಿಂಹ, ತೇಜಸ್ವಿ ಸೂರ್ಯ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಬಹಿರಂಗ ಚರ್ಚೆಗೆ ಬರಲಿ ಎಂದು ಸವಾಲು ಹಾಕಿದ್ದರು.




Leave a Reply

Your email address will not be published. Required fields are marked *

error: Content is protected !!