ಬೆಂಗಳೂರು: ಶಾಸಕ ಆನಂದ ಸಿಂಗ್ ರಾಜೀನಾಮೆ ಬಳಿಕ ಬೆಳಗಾವಿ ಜಿಲ್ಲೆ ಗೋಕಾಕ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ ಜಾರಕಿಹೊಳಿ ಅವರು ಸಹ ರಾಜೀನಾಮೆ ಸಲ್ಲಿಸಿದ್ದಾರೆ. ಈ ಬಗ್ಗೆ ಅವರು ಸ್ಪೀಕರ್ ಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ತಮ್ಮ ಶಾಸಕತ್ವ ಸ್ಥಾನಕ್ಕೆ ಯಾಕೆ ರಾಜೀನಾಮೆ ಕೊಡ್ತಿದ್ದೇನೆ ಅನ್ನೋ ಯಾವುದೇ ಕಾರಣವನ್ನ ನೀಡದ ಅವರು ಸ್ವಇಚ್ಚೆಯಿಂದ ರಾಜೀನಾಮೆ ನೀಡ್ತಿದ್ದೇನೆ ಅಂತಾ ತಿಳಿಸಿದ್ದಾರೆ.
ಇನ್ನು ಬಳ್ಳಾರಿಯ ವಿಜಯನಗರ ಶಾಸಕ ಆನಂದ ಸಿಂಗ್ ಸಹ ಚುಟುಕಾಗಿ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಅವರು ಸಹ ಯಾವುದೇ ಕಾರಣ ನೀಡಿರುವುದಿಲ್ಲ. ಈ ಇಬ್ಬರು ಕಾಂಗ್ರೆಸ್ ಶಾಸಕರ ರಾಜೀನಾಮೆಯಿಂದ ಇದೀಗ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿದೆ.