ಪ್ರಜಾಸ್ತ್ರ ಸುದ್ದಿ
ದಾವಣಗೆರೆ: ಹೊನ್ನಳ್ಳಿಯ ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ಅವರ ಸಹೋದರನ ಮಗ ಚಂದ್ರಶೇಖರ್ ಕಳೆದ ಐದು ದಿನಗಳ ಹಿಂದೆ ನಾಪತ್ತೆಯಾಗಿದ್ದರು. ಇದೀಗ ಚಂದ್ರಶೇಖರ್ ಮೃತದೇಹ ಪತ್ತೆಯಾಗಿದೆ.
ಕಡದಕಟ್ಟೆ ಗ್ರಾಮದ ತುಂಗಾ ಕಾಲುವೆಯಲ್ಲಿ ಚಂದ್ರಶೇಖರ್ ಕಾರು ಬಿದ್ದಿರುವುದು ಪತ್ತೆಯಾಗಿದೆ. ಅದನ್ನು ಕ್ರೇನ್ ಮೂಲಕ ಮೇಲೆತ್ತಿದ್ದಾಗ, ಕಾರಿನಲ್ಲಿ ಚಂದ್ರಶೇಖರ್ ಮೃತದೇಹ ಇರುವುದು ಸಹ ಪತ್ತೆಯಾಗಿದೆ. ಈ ಮೂಲಕ ನಾಪತ್ತೆ ಪ್ರಕರಣ ಬೇರೆಯ ಸ್ವರೂಪ ಪಡೆದುಕೊಂಡಿದೆ.
ಶಾಸಕರ ಅಣ್ಣನ ಮಗ ಚಂದ್ರಶೇಖರ್ ಐದು ದಿನಗಳ ಹಿಂದೆ ಕಾಣೆಯಾಗಿದ್ದರು. ಅಂದಿನಿಂದ ಪೊಲೀಸರು ತನಿಖೆ ನಡೆಸುತ್ತಿದ್ದರು. ತುಂಗಾ ಕಾಲುವೆ ಕಡೆ ಚಂದ್ರಶೇಖರ್ ಚಲಾಯಿಸಿದೆ ಅನ್ನೋದು ಸುಳಿವು ಪೊಲೀಸರಿಗೆ ಸಿಕ್ಕಿತು. ಕಾಲುವೆ ಬಳಿ ತೆರಳಿ ಪೊಲೀಸರು ಪರಿಶೀಲನೆ ನಡೆಸಿದಾಗ ಕಾರು ಕಾಲುವೆಗೆ ಬಿದ್ದಿರುವುದು ಪತ್ತೆಯಾಗಿದೆ. ಅದನ್ನು ಹೊರ ತೆಗೆದಾಗ ಕಾರಿನಲ್ಲಿ ಚಂದ್ರಶೇಖರ್ ಮೃತದೇಹ ಸಹ ಪತ್ತೆಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.