ಪ್ರಜಾಸ್ತ್ರ ಸುದ್ದಿ
ಹೈದ್ರಾಬಾದ್: ಹೃದಯಾಘಾತದಿಂದ ತೆಲಂಗಾಣದ ಟಿಆರ್ ಎಸ್ ಪಕ್ಷದ ಶಾಸಕ ಎಸ್ ರಾಮಲಿಂಗಾ ರೆಡ್ಡಿ ನಿಧನರಾಗಿದ್ದಾರೆ. 59 ವರ್ಷದ ಎಸ್ ರಾಮಲಿಂಗಾ ರೆಡ್ಡಿ ಮೊಳಕಾಲಿನ ಶಸ್ತ್ರಚಿಕಿತ್ಸೆಗಾಗಿ ಇತ್ತೀಚೆಗೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ರು.
ತೀವ್ರಅನಾರೋಗ್ಯದ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಗಾಚಿಬೌಲಿಯಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಇಂದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ದುಬ್ಬಾಕಾ ಕ್ಷೇತ್ರದ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಶಾಸಕ ಎಸ್ ರಾಮಲಿಂಗಾ ರೆಡ್ಡಿ ನಿಧನಕ್ಕೆ ಸಿಎಂ ಕೆ.ಚಂದ್ರಶೇಖರರಾವ ಸಂತಾಪ ಸೂಚಿಸಿದ್ದಾರೆ.