ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕೇಂದ್ರದ ಕೃಷಿ ಕಾಯ್ದೆಗಳನ್ನ ವಿರೋಧಿಸಿ ರೈತರು ನಡೆಸ್ತಿರುವ ಪ್ರತಿಭಟನೆಗೆ ಬೆಂಬಲಿಸಿ, ರಾಜ್ಯ ಕಾಂಗ್ರೆಸ್ ರಾಜಭವನ ಚಲೋ ನಡೆಸಿದೆ. ಈ ಬೃಹತ್ ಪ್ರತಿಭಟನೆ ವೇಳೆ ಕಾಂಗ್ರೆಸ್ ಶಾಸಕಿ ಸೌಮ್ಯ ರೆಡ್ಡಿ ಮಹಿಳಾ ಪೇದೆ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ.
ಒಬ್ಬ ಶಾಸಕಿಯಾಗಿ, ಹೆಣ್ಣುಮಗಳಾಗಿ ಮಹಿಳೆಯರ ಸಬಲೀಕರಣಕ್ಕೆ ನಾಂದಿ ಹಾಡಬೇಕು. ಅದು ಬಿಟ್ಟು ಇನ್ನೊಬ್ಬ ಹೆಣ್ಣುಮಗಳ ಮೇಲೆ ಕೈ ಮಾಡುವುದು ಸರಿಯೇ? ಪ್ರತಿಭಟನೆ ಇರುವುದು ಸರ್ಕಾರದ ವಿರುದ್ಧ. ಆದರೆ, ಮಹಿಳಾ ಪೇದೆಯ ಮೇಲೇಕೆ ದರ್ಪ ಎಂದು ಟ್ವೀಟರ್ ಮೇಲೆ ಪ್ರಶ್ನಿಸಿದ್ದಾರೆ.