ವಿರೋಧ ಪಕ್ಷದ ನಾಯಕನ ಹುದ್ದೆಗೆ ಬಿಡ್ ಸಲ್ಲಿಸಿಲ್ಲವೇ?: ಕೈ ಪ್ರಶ್ನೆ

247

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯೋಮಿ ಗೋವಿಂದ್ ಬಾಬು ಪೂಜಾರಿ ಎಂಬುವರಿಗೆ ಚೈತ್ರಾ ಕುಂದಾಪುರ ಸೇರಿ 9 ಜನರು ಕೋಟ್ಯಾಂತರ ರೂಪಾಯಿ ಮೋಸ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬಂಧನವಾಗಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಎಕ್ಸ್ ನಲ್ಲಿ ಪೋಸ್ಟ್ ಮಾಡುವ ಮೂಲಕ ಬಿಜೆಪಿಯ ಕಾಲೆಳೆಯುವ ಕೆಲಸ ಮಾಡಿದೆ.

ಬಿಜೆಪಿಯಲ್ಲಿ ಎಲ್ಲವನ್ನೂ ಮಾರಾಟಕ್ಕೆ ಇಡಲಾಗಿದೆಯೇ ಎಂದು ಕೇಳುವ ಮೂಲಕ ಸಿಎಂ ಹುದ್ದೆಗೆ 2,500 ಕೋಟಿ, ಮಂತ್ರಿಗಿರಿಗೆ 70-80 ಕೋಟಿ, ಎಂಎಲ್ಎ  ಟಿಕೆಟ್ ಗೆ 7 ಕೋಟಿ ಇದೆಲ್ಲವೂ ಬಿಜೆಪಿಯವರಿಂದಲೇ ಬಯಲಾದ ಸತ್ಯಗಳು. ಯತ್ನಾಳ್ ಆಣೆಗೂ ಇದನ್ನು ನಾವು ಹೇಳಿದಲ್ಲ ಎನ್ನುತ್ತಲೇ ಈ ಮಾರಾಟದ ಆಟದಲ್ಲಿ ವಿರೋಧ ಪಕ್ಷದ ನಾಯಕನ ಹುದ್ದೆಗೆ ಇನ್ನೂ ಯಾರೊಬ್ಬರೂ ಬಿಡ್ ಸಲ್ಲಿಸಿಲ್ಲವೇ ಎಂದು ಪ್ರಶ್ನಿಸಿದೆ.




Leave a Reply

Your email address will not be published. Required fields are marked *

error: Content is protected !!