ಯತ್ನಾಳ ರಾಜೀನಾಮೆ ಕೊಟ್ಟು ಹೋಗಲಿ: ಶಾಸಕ ದಡೇಸುಗೂರು

248

ಪ್ರಜಾಸ್ತ್ರ ಸುದ್ದಿ

ಕೊಪ್ಪಳ: ತಮ್ಮದೆ ಸರ್ಕಾರ ಹಾಗೂ ಮುಖ್ಯಮಂತ್ರಿ ವಿರುದ್ಧ ಸದಾ ವಾಗ್ದಾಳಿ ನಡೆಸ್ತಿರುವ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ, ಶಾಸಕ ಬಸವರಾಜ ದಡೇಸುಗೂರು ಕಿಡಿ ಕಾರಿದ್ದಾರೆ. ಯತ್ನಾಳಗೆ ಇಷ್ಟವಿಲ್ಲ ಅಂದ್ರೆ ರಾಜೀನಾಮೆ ಕೊಟ್ಟು ಮನೆಯಲ್ಲಿ ಇರಲಿ. ಮುಂದಿನ ಎರಡು ವರ್ಷ ಯಡಿಯೂರಪ್ಪನವರೆ ಸಿಎಂ ಅಂದರು.

ಯಡಿಯೂರಪ್ಪನವರ ಬಗ್ಗೆ ಗೌರವ ಇಲ್ಲ. ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಪದೆಪದೆ ಆರೋಪಿಸುತ್ತಿರುವ ಬದಲು ರಾಜೀನಾಮೆ ಕೊಡಲಿ. ಯಾರೇ ಆಗಲಿ ಪಕ್ಷದ ಚೌಕಟ್ಟಿನಲ್ಲಿ ಮಾತನಾಡಬೇಕು ಎಂದು ಯತ್ನಾಳ ವಿರುದ್ಧ ಕಿಡಿ ಕಾರಿದ್ದಾರೆ.




Leave a Reply

Your email address will not be published. Required fields are marked *

error: Content is protected !!