ಪ್ರಜಾಸ್ತ್ರ ಸುದ್ದಿ
ವಿಜಯಪುರ: ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿಗಳ ವಿರುದ್ಧ ಸದಾ ಹೇಳಿಕೆ ನೀಡ್ತಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಸಚಿವ ಬಿ.ಸಿ ಪಾಟೀಲ ತಿರುಗೇಟು ನೀಡಿದ್ದಾರೆ. ಮುಖ್ಯಮಂತ್ರಿ ಸ್ಥಾನ ಗೌರವಯುತವಾದದ್ದು, ಅವರಿಗೆ ಎಲ್ಲ ಗೌರವ ಕೊಡಬೇಕು ಎಂದಿದ್ದಾರೆ. ಸೋಮವಾರ ವಿಜಯಪುರದ ಇಟ್ಟಂಗಿಹಾಳ ಫುಡ್ ಪಾರ್ಕ್ ಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಮಾತ್ನಾಡಿದ ವೇಳೆ ಯತ್ನಾಳಗೆ ತಿರುಗೇಟು ನೀಡಿದ್ರು.
ಮೀಸಲಾತಿ ಸಮಾವೇಶದಲ್ಲಿ ಬರೀ ಯತ್ನಾಳ ಒಬ್ಬರೆ ಭಾಗವಹಿಸಿಲ್ಲ. ಸಿಎಂ ಸ್ಥಾನಕ್ಕೆ ಗೌರವ ಕೊಡಬೇಕು. ಮೀಸಲಾತಿ ಸಿಗದಿದ್ರೆ ಶಾಸಕರು, ಸಚಿವರು ರಾಜೀನಾಮೆ ನೀಡಬೇಕು ಅನ್ನೋದು ಅವರ ವೈಯಕ್ತಿಕ ವಿಚಾರ. ಯತ್ನಾಳ ಹೇಳಿದಾಕ್ಷಣ ರಾಜೀನಾಮೆ ಕೊಡಬೇಕು ಅನ್ನೋದು ಏನಿಲ್ಲ. ಈ ರೀತಿ ಬೇರೆಯವರ ಮೇಲೆ ಒತ್ತಡ ಹೇರುವುದು ಒಳ್ಳೆಯದಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಈ ವೇಳೆ ಮಾಜಿ ಸಚಿವರಾದ ಎಂ.ಬಿ ಪಾಟೀಲ, ಶಿವಾನಂದ ಪಾಟೀಲ, ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಕಳ್ಳಿಮನಿ ಸೇರಿದಂತೆ ಅನೇಕರು ಭಾಗವಹಿಸಿದ್ರು.