ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವರದೆ ಪಕ್ಷದ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಾಗ್ದಾಳಿ ನಡೆಸಿದ್ದಾರೆ. ಬಿಹಾರದಲ್ಲಿ ಪ್ರವಾಹ ಆಗಿದ್ದಕ್ಕೆ ಪ್ರಧಾನಿ ಟ್ವೀಟ್ ಮಾಡಿದ್ದಾರೆ. ಆದ್ರೆ, ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ಮಾಡ್ತಿದ್ದಾರೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.
ರಾಜ್ಯದಲ್ಲಿ 25 ಸಂಸದರನ್ನ ಆಯ್ಕೆ ಮಾಡಿ ಕಳಿಸಲಾಗಿದೆ. ದಕ್ಷಿಣ ಭಾರತದಲ್ಲಿ ಇಷ್ಟೊಂದು ಸಂಖ್ಯೆ ಎಲ್ಲಿದೆ. ಇದೆ ರೀತಿಯಾದ್ರೆ ಜನ ಪಾಠ ಕಲಿಸುತ್ತಾರೆ. ಎಂತೆಂಥವರಿಗೋ ಜನ ಪಾಠ ಕಲ್ಲಿಸಿದ್ದಾರೆ. ಇವರೆಲ್ಲ ಯಾವ ಲೆಕ್ಕ ಎಂದು ಕೇಂದ್ರದ ವಿರುದ್ಧ ಭರ್ಜರಿಯಾಗಿ ವಾಗ್ದಾಳಿ ನಡೆಸಿದ್ದಾರೆ.