ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಹಿಂದಿನ ಬಿಜೆಪಿ ಸರ್ಕಾರ ತನಿಖೆಯನ್ನು ಸಿಬಿಐಗೆ ವಹಿಸಿತ್ತು. ಇದನ್ನು ಈಗಿನ ಸರ್ಕಾರ ಸಚಿವ ಸಂಪುಟದ ಅನುಮೋದನೆ ಬಳಿಕ ವಾಪಸ್ ಪಡೆದಿದೆ. ಇದನ್ನು ಪ್ರಶ್ನಿಸಿ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಸರ್ಕಾರ ತೆಗೆದುಕೊಂಡ ನಿರ್ಧಾರ ಸರಿಯಾಗಿಲ್ಲ. ಸಿಬಿಐ ತನಿಖೆಯನ್ನು ಹಿಂದಕ್ಕೆ ಪಡೆದ ಸರ್ಕಾರದ ನಿರ್ಧಾರದ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ. ಈ ಮೂಲಕ ಪಕ್ಷಕ್ಕಿಂತ ಮೊದಲೇ ಡಿಕೆಶಿ ವಿರುದ್ಧ ಯತ್ನಾಳ ಕಾನೂನು ಹೋರಾಟ ನಡೆಸಿದ್ದಾರೆ.