ವಿಜಯಪುರ: ಶಾಸಕ ಬಸನಗೌಡ ಪಾಟೀಲ ಯತ್ನಾಳ ಪರವಾಗಿ ಶ್ರೀಶೈಲ ಜಗದ್ಗುರು ಡಾ.ಚನ್ನ ಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಗೃಹ ಸಚಿವ ಅಮಿತ ಶಾಗೆ ಪತ್ರ ಬರೆದಿದ್ದಾರೆ.
ಶಾಸಕರಿಗೆ ನೀಡಿರುವ ಶೋಕಾಸ್ ನೋಟಿಸ್ ವಾಪಸ್ ಪಡೆಯಬೇಕೆಂದು ಪತ್ರ ಬರೆದಿದ್ದಾರೆ. ಉತ್ತರ ಕರ್ನಾಟಕದಲ್ಲಿ ಉಂಟಾದ ಪ್ರವಾಹದ ಜನರ ಪರವಾಗಿ ಮಾತ್ನಾಡಿದ್ದಾರೆ. ಯತ್ನಾಳ ಬಿಜೆಪಿಯ ಪ್ರಾಮಾಣಿಕ ನಾಯಕ. ಅವರ ಧ್ವನಿಗೆ ನಾವು ಬೆಂಬಲ ನೀಡಿದ್ದೇವೆ. ಆದ್ರಿಂದ ಅವರಿಗೆ ನೀಡಿರುವ ಶೋಕಾಸ್ ನೋಟಿಸ್ ವಾಪಸ್ ಪಡೆಯಬೇಕೆಂದು ಕೇಳಿಕೊಂಡಿದ್ದಾರೆ.
ಅಮಿತ ಶಾಗೆ ಬರೆದಿರುವ ಪತ್ರದಲ್ಲಿ ಇದೆಲ್ಲವನ್ನ ಶ್ರೀಗಳು ಉಲ್ಲೇಖಿಸಿದ್ದಾರೆ. ನೋಟಿಸ್ ವಾಪಸ್ ಪಡೆಯದಿದ್ರೆ, ಬಿಜೆಪಿಗೆ ಉತ್ತರ ಕರ್ನಾಟಕದಲ್ಲಿ ತೊಂದ್ರೆಯಾಗುತ್ತೆ ಅನ್ನೋ ಎಚ್ಚರಿಕೆಯನ್ನ ನೀಡಿದ್ದಾರೆ.