ಒಳಗೆ ಖಾಕಿ ಚಡ್ಡಿ ಹಾಕಿ ಅರಸು ಕಾರಲ್ಲಿ ಕುಳಿತರೆ ಆಗದು: ಹರಿಪ್ರಸಾದ್

195

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ರಚನೆಯಾದ ಮೇಲೆ ತಮಗೆ ಸಚಿವ ಸ್ಥಾನ ಸಿಗುತ್ತೆ ಎಂದುಕೊಂಡಿದ್ದ ಎಂಎಲ್ಸಿ ಬಿ.ಕೆ ಹರಿಪ್ರಸಾದಗೆ ನಿರಾಸೆಯಾಗಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸುತ್ತಿದ್ದವರು ಇಂದು ನೇರವಾಗಿ ಕಿಡಿ ಕಾರಿದ್ದಾರೆ.

ಅರಸು ಅವರ ಕಾರಿನಲ್ಲಿ ಕುಳಿತರೆ ಸಾಲದು. ಅವರ ಚಿಂತನೆ ಇರಬೇಕು. ಪಂಚೆ, ವಾಚು ಕಟ್ಟಿ ಒಳಗಡೆ ಖಾಕಿ ಚಡ್ಡಿ ಹಾಕಿ ಸಮಾಜವಾದಿ ಎಂದು ಹೇಳಿದರೆ ಆಗುವುದಿಲ್ಲ. ನನ್ನನ್ನು ಸಚಿವನನ್ನಾಗಿ ಮಾಡದಿದ್ದಕ್ಕೆ ಸಿದ್ದರಾಮಯ್ಯನವರಿಗೆ ಧನ್ಯವಾದಗಳು ಎನ್ನುವ ಮೂಲಕ ಟಾಂಗ್ ಕೊಟ್ಟಿದ್ದಾರೆ.

ಕಾಗೋಡು ತಿಮ್ಮಪ್ಪ, ಬಂಗಾರಪ್ಪ ಎಂದೂ ಜಾತಿ ರಾಜಕಾರಣ ಮಾಡಲಿಲ್ಲ. ಪರಮೇಶ್ವರಗೆ ಸಿಎಂ ಆಗುವ ಅರ್ಹತೆ ಇದ್ದರೂ ಮಾಡಲಿಲ್ಲ ಎಂದು ಕಿಡಿ ಕಾರಿದರು.




Leave a Reply

Your email address will not be published. Required fields are marked *

error: Content is protected !!