ಪರಿಷತ್ ಚುನಾವಣೆ: ಕಾಂಗ್ರೆಸ್ 5 ಹೆಸರು ಘೋಷಣೆ

99

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮುಂಬರುವ ವಿಧಾನ ಪರಿಷತ್ ಚುನಾವಣೆ ಸಂಬಂಧ ಕಾಂಗ್ರೆಸ್ ತನ್ನ 5 ಅಭ್ಯರ್ಥಿಗಳ ಹೆಸರನ್ನು ಭಾನುವಾರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಪ್ರಕಟಿಸಿದ್ದಾರೆ. 2 ಪದವೀಧರ ಹಾಗೂ 3 ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ.

ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ರಾಮೋಜಿಗೌಡ, ಈಶಾನ್ಯ ಕ್ಷೇತ್ರಕ್ಕೆಡಾ.ಚಂದ್ರಶೇಖರ್ ಪಾಟೀಲ ಹೆಸರು ಘೋಷಿಸಲಾಗಿದೆ. ಇನ್ನು ಶಿಕ್ಷಕರ ಕ್ಷೇತ್ರವಾದ ಬೆಂಗಳೂರಿಗೆ ಪುಟ್ಟಣ, ನೈರುತ್ಯಕ್ಕೆ ಕೆ.ಕೆ ಮಂಜುನಾಥ್ ಹಾಗೂ ಆಗ್ನೇಯ ಕ್ಷೇತ್ರಕ್ಕೆ ಡಿ.ಟಿ ಶ್ರೀನಿವಾಸ್ ಹೆಸರು ಪ್ರಕಟಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!