ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ವಿಧಾನ ಪರಿಷತ್ ಗೆ ನಡೆಯಲಿರುವ ಚುನಾವಣೆ ಸಂಬಂಧ ಇಂದು ಸಂಜೆಯೊಳಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಲಿದೆಯಂತೆ. ವಿಧಾನಸಭೆಯಲ್ಲಿ ಬಿಜೆಪಿ ಹೊಂದಿರುವ ಬಲದ ಆಧಾರದಲ್ಲಿ ನಾಲ್ವರು ಸದಸ್ಯರನ್ನು ಆಯ್ಕೆ ಮಾಡಬಹುದು.
ಸಧ್ಯ 8 ಹೆಸರು ಪಟ್ಟಿಯಲ್ಲಿ ಅಂತಿಮ ಪಟ್ಟಿಯಲ್ಲಿ ಯಾರ ಹೆಸರು ಇರುತ್ತೆ ಅನ್ನೋ ಕುತೂಹಲವಿದೆ. ಯಾಕಂದರೆ, ನಾಮಪತ್ರ ಸಲ್ಲಿಕೆಗೆ ನಾಳೆ ಕೊನೆಯ ದಿನವಾಗಿದೆ. ಹೊಸಬರಿಗೆ ಅವಕಾಶ ಸಿಗುತ್ತಾ, ಕುಟುಂಬ ರಾಜಕಾರಣಕ್ಕೆ ಇತಿಶ್ರೀ ಹಾಡಲಾಗುತ್ತಾ, ಸಾಮಾಜಿಕ ನ್ಯಾಯ, ಪ್ರಾದೇಶಿಕ ನ್ಯಾಯ ಪಾಲನೆಯಾಗುತ್ತಾ, ಮಹಿಳೆಯರಿಗೆ ಅವಕಾಶ ಸಿಗುತ್ತಾ ಅನ್ನೋದು ಸೇರಿ ಹಲವು ಪ್ರಶ್ನೆಗಳಿವೆ.
ಇನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ದಾವೋಸ್ ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ಸಮ್ಮೇಳನಕ್ಕೆ ತೆರಳಿದ್ದಾರೆ. ಹೀಗೆ ತರಳುವ ಮೂದಲು ಅಭ್ಯರ್ಥಿಗಳ ಪಟ್ಟಿಯನ್ನು ಹೈಕಮಾಂಡ್ ಜೊತೆ ಚರ್ಚಿಸಿ ಫೈನಲ್ ಮಾಡಿದ್ದಾರಂತೆ.