ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ 20 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಮಾತನಾಡಿದ್ದಾರೆ. ಟಿಕೆಟ್ ಸಿಗದೆ ಇರುವ ಕಾರಣಕ್ಕೆ ಬಂಡಾಯವೆದ್ದು ಒಂದು ವೇಳೆ ಸ್ಪರ್ಧೆ ಮಾಡಿದರೆ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡುತ್ತೇವೆ ಅನ್ನೋ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಟ್ವೀಟರ್ ನಲ್ಲಿ ಕಾಲೆಳೆದಿರುವ ರಾಜ್ಯ ಬಿಜೆಪಿ, ಕಾರ್ಯಕರ್ತರು ಧ್ವನಿ ಎತ್ತಬಾರದು ಅನ್ನೋ ಸೂಚನೆಯೋ ಅಥವ ಸಿದ್ದರಾಮಯ್ಯ ಬಣಕ್ಕೆ ನೀಡುತ್ತಿರುವ ಎಚ್ಚರಿಕೆಯೋ ಎಂದು ಪ್ರಶ್ನಿಸಿದೆ.