ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು

187

ಪ್ರಜಾಸ್ತ್ರ ಸುದ್ದಿ

ಮೈಸೂರು: ಸಾಕಷ್ಟು ಕುತೂಹಲ ಮೂಡಿಸಿದ್ದ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಧು ಜಿ.ಮಾದೇಗೌಡ ಗೆಲುವು ಸಾಧಿಸಿದ್ದಾರೆ. ಈ ಮೂಲಕ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಮೊದಲ ಬಾರಿಗೆ ಗೆಲುವು ದಾಖಲಿಸಿದೆ.

ಎರಡನೇ ಪ್ರಾಶಸ್ತ್ಯ ಮತಪತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮೈ.ವಿ ರವಿಶಂಕರ್ ಅವರನ್ನು ಹಿಂದಿಕ್ಕಿ ಗೆದ್ದಿದ್ದಾರೆ. 12,213 ಮತಗಳ ಅಂತದಿಂದ ಮಾದೇಗೌಡ ಗೆಲುವಿನ ನಗೆ ಬೀರಿದ್ದಾರೆ. ಇದರೊಂದಿಗೆ ಎರಡು ಕ್ಷೇತ್ರ ಬಿಜೆಪಿ, ಎರಡು ಕ್ಷೇತ್ರ ಕಾಂಗ್ರೆಸ್ ಗೆದ್ದುಕೊಂಡಿದೆ. ಜೆಡಿಎಸ್ ಗೆ ತೀವ್ರ ಮುಖಭಂಗವಾಗಿದೆ.




Leave a Reply

Your email address will not be published. Required fields are marked *

error: Content is protected !!