ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಎಂಎಲ್ ಸಿ ಹೆಚ್.ವಿಶ್ವನಾಥ ಸಚಿವರಾಗುವ ಕನಸು ಭಗ್ನಗೊಂಡಿದೆ. ಹೈಕೋರ್ಟ್ ನೀಡಿದ್ದ ತೀರ್ಪನ್ನ ಸುಪ್ರೀಂ ಕೋರ್ಟ್ ಸಹ ಎತ್ತಿ ಹಿಡಿದಿದೆ. ಹೀಗಾಗಿ ಮಂತ್ರಿಯಾಗಬೇಕು ಎಂದುಕೊಂಡಿದ್ದ ಹಳ್ಳಿ ಹಕ್ಕಿ ಕನಸಿಗೆ ತಣ್ಣೀರು ಎರಚಿದಂತಾಗಿದೆ.
ಸಾಹಿತ್ಯ ಕ್ಷೇತ್ರದ ಮೂಲಕ ವಿಧಾನ ಪರಿಷತ್ ಗೆ ನಾಮನಿರ್ದೇಶನ ಮಾಡಲಾಗಿದೆ. ಇದರ ಆಧಾರದ ಮೇಲೆ ಸಚಿವರಾಗುವುದು ಅಸಾಧ್ಯವೆಂದು ಹೈಕೋರ್ಟ್ ಹೇಳಿತ್ತು. ಇದನ್ನ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಕದ ತಟ್ಟಿದ್ದರು. ಈಗ ಸುಪ್ರೀಂ ಕೋರ್ಟ್ ಸಚಿವರಾಗುವುದು ಅಸಾಧ್ಯವೆಂದು ಹೇಳಿದೆ.