ಎಂ.ಎಂ ಕಲಬುರ್ಗಿ ಹತ್ಯೆ ಪ್ರಕರಣ: ಬಿಗಿ ಭದ್ರತೆಯಲ್ಲಿ ಆರೋಪಿಗಳು ಕೋರ್ಟಿಗೆ

277

ಪ್ರಜಾಸ್ತ್ರ ಸುದ್ದಿ

ಧಾರವಾಡ: ಖ್ಯಾತ ಸಂಶೋಧಕರಾಗಿದ್ದ ಡಾ.ಎಂ.ಎಂ ಕಲಬುರ್ಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಆರೋಪಿಗಳನ್ನು ಇಲ್ಲಿನ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ಬಿಗಿ ಪೊಲೀಸ್ ಭದ್ರತೆಯ ನಡುವೆ ಮುಂಬೈನ ಆರ್ಥರ್ ರೋಡ್ ಜೈಲಿನಿಂದ ಆರೋಪಿಗಳನ್ನು ಕರೆದುಕೊಂಡು ಬರಲಾಯಿತು.

ಧಾರವಾಡದ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಆರೋಪಿಗಳನ್ನು ಹಾಜರು ಪಡಿಸಲಾಯಿತು. ಸುಮಾರು ಅರ್ಧ ಗಂಟೆಗೂ ಅಧಿಕ ಕಾಲ ವಿಚಾರಣೆ ನಡೆಸಲಾಯಿತು. ಈ ವೇಳೆ ಕೋರ್ಟ್ ಸುತ್ತಮುತ್ತ ಸೂಕ್ತ ಬಂದೋಬಸ್ತಿ ವಹಿಸಲಾಗಿತ್ತು.




Leave a Reply

Your email address will not be published. Required fields are marked *

error: Content is protected !!