ಫೋನ್ ಚಾರ್ಜ್ ವಿಚಾರಕ್ಕೆ ಹೋಯ್ತು ಒಬ್ಬನ ಪ್ರಾಣ

260

ಪ್ರಜಾಸ್ತ್ರ ಅಪರಾಧ ಸುದ್ದಿ

ಬೆಂಗಳೂರು: ಇವತ್ತಿನ ದಿನಮಾನಗಳಲ್ಲಿ ಸಣ್ಣಪುಟ್ಟ ವಿಚಾರಕ್ಕೂ ಗಲಾಟೆಗಳು, ಹಲ್ಲೆಗಳು, ಕೊಲೆಗಳು ನಡೆಯುತ್ತಿವೆ. ಇಲ್ಲೊಂದು ಪ್ರಕಣರದಲ್ಲಿ ಫೋನ್ ಚಾರ್ಜ್ ಹಾಕುವ ವಿಚಾರದಲ್ಲಿ ಒಬ್ಬನ ಪ್ರಾಣ ಹೋಗಿದೆ.

ಸಿಲಿಕಾನ್ ಸಿಟಿಯ ರಾಜಾಜಿನಗರದಲ್ಲಿ ಮಧ್ಯಪ್ರದೇಶ ಮೂಲದ ಇಬ್ಬರು ಯುವಕರು ವಾಸವಾಗಿದ್ದರು. ಗ್ರ್ಯಾನೈಟ್ ಕೆಲಸ ಮಾಡಿಕೊಂಡು ಜೀವನ ಮಾಡುತ್ತಿದ್ದರು. ನಿನ್ನೆ ರಾತ್ರಿ ಇವರಿಬ್ಬರು ಮದ್ಯ ಕುಡಿದಿದ್ದಾರೆ. ಈ ವೇಳೆ ಫೋನ್ ಚಾರ್ಜ್ ಹಾಕುವ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆದು ಅದು ವಿಕೋಪಕ್ಕೆ ಹೋಗಿದೆ.

ಮದ್ಯದ ನಶೆಯಲ್ಲಿ ಒಬ್ಬನಿಗೆ ಕಟ್ಟಿಗೆಯಿಂದ ತಲೆಗೆ ಹೊಡೆದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಅವನನ್ನ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದ್ರೆ, ಚಿಕಿತ್ಸೆ ಫಲಿಸದೆ ಆತ ಇಂದು ಸಾವನ್ನಪ್ಪಿದ್ದಾನೆ. ಈ ಸಂಬಂಧ ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!