Search

ಈತ ಮೊಬೈಲ್ ಟವರ್ ಏರಿದ್ಯಾಕೆ?

294

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಜಿಲ್ಲೆಯ ಸಿಂದಗಿ ತಾಲೂಕಿನ ಬಳಗಾನೂರ ಗ್ರಾಮದಲ್ಲಿ ವ್ಯಕ್ತಿಯೊಬ್ಬ ಬೆತ್ತಲೆಯಾಗಿ ಮೊಬೈಲ್ ಟವರ್ ಏರಿದ ಘಟನೆ ಶನಿವಾರ ನಡೆದಿದೆ. ತೆಗ್ಗಿಹಳ್ಳಿ ಗ್ರಾಮದ ಸತೀಶ್ ಕಡಣಿ ಟವರ್ ಏರಿ ಆತಂಕ ಸೃಷ್ಟಿಸಿದ್ದಾನೆ.

ಸತೀಶ್ ವಿವಸ್ತ್ರನಾಗಿ ಟವರ್ ಏರಿ ಅಪಾಯಕಾರಿಯಾಗಿ ನಡೆದುಕೊಂಡಿದ್ದಾನೆ. ಈ ಕುರಿತು ಮಾಹಿತಿ ಪಡೆದು ಆಲಮೇಲ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಆತನನ್ನು ಕಳಕ್ಕೆ ಇಳಿಸುವ ಪ್ರಯತ್ನ ನಡೆಸಿದ್ದಾರೆ. ಮದ್ಯದ ನಶೆಯಲ್ಲಿ ಈ ರೀತಿ ನಡೆದುಕೊಂಡಿದ್ದಾನೆ ಎನ್ನಲಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!