ನಿರುದ್ಯೋಗ, ಹಣದುಬ್ಬರ ದೇಶವನ್ನು ಕಾಡುತ್ತಿದೆ: ಪ್ರಿಯಾಂಕಾ ಗಾಂಧಿ

66

ಪ್ರಜಾಸ್ತ್ರ ಸುದ್ದಿ

ಜೈಪುರ: ರಾಜಸ್ಥಾನದ ಜಲೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೈಭವ್ ಗೆಹ್ಲೋತ್ ಪರ ನಡೆದ ಚುನಾವಣಾ ರ್ಯಾಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಅವರು, ನಿರುದ್ಯೋಗ ಹಾಗೂ ಹಣದುಬ್ಬರ ಈ ದೇಶವನ್ನು ಕಾಡುತ್ತಿದೆ ಎಂದರು.

ಪ್ರಧಾನಿ ಮೋದಿ ಅತಿಯಾಗಿ ಅಧಿಕಾರ ಬಳಸುತ್ತಿದ್ದಾರೆ. ಇದರಿಂದಾಗಿ ಅವರ ಸುತ್ತಲಿನ ಜನ ಸತ್ಯ ತಿಳಿಸಲು ಹೆದರುತ್ತಿದ್ದಾರೆ. ಇದರಿಂದಾಗಿ ಜನರ ಸಮಸ್ಯೆಗಳಿಂದ ಮೋದಿ ವಿಮುಖರಾಗಿದ್ದಾರೆ. ಬಿಜೆಪಿ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿಲ್ಲ. ವಿರೋಧ ಪಕ್ಷಗಳ ಬಾಯಿ ಮುಚ್ಚಿಸುವ ಕೆಲಸ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಮೋದಿ ಜನರೊಂದಗಿನ ಸಂಪರ್ಕ ಕಡೆದುಕೊಂಡಿದ್ದಾರೆ. ಹೀಗಾಗಿ ದೇಶವನ್ನು ಕಾಡುತ್ತಿರುವ ಸಮಸ್ಯೆಗಳ ಬಗ್ಗೆ ಅವರು ತಲೆ ಕೆಡಿಸಿಕೊಳ್ಳುತ್ತಿಲ್ಲ. ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು, ಜನರು ಪರಿತಪಿಸುತ್ತಿದ್ದಾರೆ ಅಂತಾ ಹೇಳಿದರು.




Leave a Reply

Your email address will not be published. Required fields are marked *

error: Content is protected !!