ಅನುಕಂಪವಿಲ್ಲದ ಮೋದಿ ದೇವರಾ?

401

ಬೆಂಗಳೂರು: ಪ್ರಧಾನಿ ಮೋದಿ ಅವರನ್ನ ಹೊಗಳುವ ಭರದಲ್ಲಿ ದೇವರೆಂದು ಕರೆದು, ಸಂಸದ ಪ್ರತಾಪ ಸಿಂಹ ವಿವಾದ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಾಜಿ ಸಚಿವ ಹೆಚ್.ಕೆ ಪಾಟೀಲ ಪ್ರತಿಕ್ರಿಯೆ ನೀಡಿದ್ದು, ಇದು ಶೋಭೆಯಲ್ಲ ಎಂದಿದ್ದಾರೆ.

ಉತ್ತರ ಕರ್ನಾಟಕ ಭಾಗದಲ್ಲಿ 20 ಲಕ್ಷಕ್ಕೂ ಹೆಚ್ಚು ಜನರನ್ನ ಸಂತ್ರಸ್ತರಾಗಿದ್ದಾರೆ. ಅವರಿಗೆ ಸ್ಪಂದಿಸುವ ಕೆಲಸ ಮಾಡುವುದು ಬಿಟ್ಟು ಪ್ರಧಾನಿ ಮೆಚ್ಚಿಸುವ ಕೆಲಸ ಮಾಡಲಾಗ್ತಿದೆ. ಇದು ಪ್ರಜ್ಞಾವಂತ ಸಂಸದನಿಗೆ ಶೋಭೆ ತರುವುದಿಲ್ಲ ಎಂದು ಕಿಡಿ ಕಾರಿದ್ದಾರೆ. ರಾಜ್ಯದ ಜನರ ಬಗ್ಗೆ ಅನುಕಂಪ ತೋರಿಸದ ಪ್ರಧಾನಿ ದೇವರಾ ಎಂದು ವಾಗ್ದಾಳಿ ನಡೆಸಿದ್ದಾರೆ.

ವಿಪಕ್ಷಗಳನ್ನ ಟೀಕಿಸುವ ವೇಗದಲ್ಲಿ ಸಂಸದ ಪ್ರತಾಪ ಸಿಂಹ, ಮೋದಿ ದೇವರಿದ್ದಂತೆ. ಅವರನ್ನ ಬೈದರೆ ದೇವರಿಗೆ ಬೈದಂತೆ. ಅವರು ಆಕಾಶದ ಎತ್ತರದಲ್ಲಿದ್ದಾರೆ. ಅವರಿಗೆ ಉಗಿದ್ರೆ ಅದು ನಿಮ್ಮ ಮೇಲೆಯೇ ಬೀಳುತ್ತದೆ ಎಂದು ಹೇಳುವ ಮೂಲಕ ವಿವಾದ ಮಾಡಿಕೊಂಡಿದ್ರು.




Leave a Reply

Your email address will not be published. Required fields are marked *

error: Content is protected !!