ಮೋದಿ-ದೀದಿ ಭೇಟಿ ಬಳಿಕ ಮುಖ್ಯ ಕಾರ್ಯದರ್ಶಿ ವಾಪಸ್

241

ಪ್ರಜಾಸ್ತ್ರ ಸುದ್ದಿ

ಕೊಲ್ಕತ್ತಾ: ಯಾಸ್ ಚಂಡಮಾರುತಕ್ಕೆ ಸಂಬಂಧಿಸಿದಂತೆ ಶುಕ್ರವಾರ ಪ್ರಧಾನಿ ಮೋದಿ ಬಂಗಾಳಕ್ಕೆ ಭೇಟಿ ಕೊಟ್ಟಿದ್ದರು. ಅಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿ ಪರಿಸ್ಥಿತಿ ಬಗ್ಗೆ ತಿಳಿದುಕೊಂಡಿದ್ರು. ಈ ಸಭೆಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅರ್ಧ ಗಂಟೆಗೆ ತಡವಾಗಿ ಬಂದಿದ್ರು.

ಸಿಎಂ ಮಮತಾಗೆ ಆಪ್ತ ಎಂದು ಹೇಳಲಾಗ್ತಿರುವ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಲಪನ್ ಬಂಡೋಪಾಧ್ಯಾಯರನ್ನ ಕೇಂದ್ರ ಸರ್ಕಾರ ವಾಪಸ್ ಕರೆಸಿಕೊಂಡಿದೆ. ಸಿಎಂ ಜೊತೆಗಿನ ಸಭೆಯ ಬಳಿಕ ಪುನರ್ ಪರಿಶೀಲನಾ ಸಭೆ ಕರೆಯಲಾಗಿತ್ತು. ಇದಕ್ಕೆ ಅಲಪನ್ ಬಂಡೋಪಾಧ್ಯಾಯ ಗೈರಾಗಿದ್ದು, ಇದ್ರಿಂದ ಅವರನ್ನ ವಾಪಸ್ ಕರೆಸಿಕೊಳ್ಳಲಾಗಿದೆಯಂತೆ.




Leave a Reply

Your email address will not be published. Required fields are marked *

error: Content is protected !!