ಪ್ರಜಾಸ್ತ್ರ ಸುದ್ದಿ
ಕೊಪ್ಪಳ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪಗೆ ಪ್ರಧಾನಿ ಮೋದಿ ಕಿರುಕುಳ ನೀಡ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಅಮರೇಗೌಡ ಬಯ್ಯಾಪುರ ಆರೋಪ ಮಾಡಿದ್ದಾರೆ. ಮೋದಿಗೆ ಕರ್ನಾಟಕ ಅಂದ್ರೆ ಅಲರ್ಜಿ ಅದಕ್ಕೆ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಹೇಳಿದ್ದಾರೆ.
ಯಡಿಯೂರಪ್ಪ ಸಿಎಂ ಸ್ಥಾನದಿಂದ ತಾವಾಗಿಯೇ ಹೋಗಲಿ ಅನ್ನೋ ಕಾರಣಕ್ಕೆ ಅನುದಾನ ನೀಡ್ತಿಲ್ಲ. ರಾಜ್ಯದ 25 ಬಿಜೆಪಿ ಸಂಸದರನ್ನ ಹತ್ತಿರಕ್ಕೂ ಬಿಟ್ಟುಕೊಳ್ಳುತ್ತಿಲ್ಲ. ಈ ಮೂಲಕ ಇಂತಹ ಸಂದರ್ಭದಲ್ಲಿ ಜನರ ಸೇವೆ ಮಾಡುತ್ತಿಲ್ಲವೆಂದು ಮೋದಿ ಹಾಗೂ ಯಡಿಯೂರಪ್ಪ ವಿರುದ್ಧ ಶಾಸಕ ಅಮರೇಗೌಡ ಬಯ್ಯಾಪುರ ವಾಗ್ದಾಳಿ ನಡೆಸಿದ್ದಾರೆ.