ಸೋಮವಾರ ಸಚಿವ ಸಂಪುಟ ಸಭೆ

281

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೋಮವಾರ ಅನೌಪಚಾರಿಕವಾಗಿ ಸಂಪುಟ ಸಭೆ ಕರೆದಿದ್ದಾರೆ. ಕ್ಯಾಬಿನೆಟ್ ಹಾಲ್ ನಲ್ಲಿ ಬೆಳಗ್ಗೆ 10 ಗಂಟೆ ಸಭೆ ಕರೆದಿದ್ದು, ಹಲವು ಮಹತ್ವದ ವಿಚಾರಗಳ ಕುರಿತು ಚರ್ಚಿಸಲಿದ್ದಾರೆ.

ಬಜೆಟ್ ಬಹಿಷ್ಕರಿಸುವ ಕಾಂಗ್ರೆಸ್ ನಾಯಕರ ನಡೆ, ರಮೇಶ ಜಾರಕಿಹೊಳಿ ಸಿಡಿ ವಿಚಾರದ ಎಸ್ಐಟಿ ತನಿಖೆ, ತಮ್ಮ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್ ಮೊರೆ ಹೋದ ಸಚಿವರ ವಿಷಯ, ಕಲಾಪದ ವೇಳೆ ಕಾಂಗ್ರೆಸ್ ತಂತ್ರವನ್ನ ಕಟ್ಟಿ ಹಾಕುವುದು ಹಾಗೂ 1 ಲೋಕಸಭೆ ಹಾಗೂ 3 ವಿಧಾನಸಭೆ ಉಪ ಚುನಾವಣೆ ದಿನಾಂಕ ಘೋಷಣೆ ಬಳಿಕ ಜಾರಿಯಾಗುವ ನೀತಿ ಸಂಹಿತೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗ್ತಿದೆ.




Leave a Reply

Your email address will not be published. Required fields are marked *

error: Content is protected !!