ಸೋಮವಾರದಿಂದ ಜಂಟಿ ಅಧಿವೇಶನ

316

ಬೆಂಗಳೂರು: ಸೋಮವಾರದಿಂದ ವಿಧಾನ ಮಂಡಲ ಜಂಟಿ ಅಧಿವೇಶನ ನಡೆಯಲಿದೆ. ಹೀಗಾಗಿ ಸಿಎಂ ಬಿ.ಎಸ್ ಯಡಿಯೂರಪ್ಪನವರು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ಭಾನುವರ ಸಭೆ ಕರೆಯಲಾಗಿದೆ.

ಸಚಿವ ಸ್ಥಾನ ವಂಚಿತ ಶಾಸಕರು ಕೈಕೊಡಬಹುದು ಅನ್ನೋ ಅನುಮಾನ ಮೂಡಿದೆ. ಹೀಗಾಗಿ ಎಲ್ಲರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳುವ ಸಲುವಾಗಿ ಸಭೆ ಕರೆಯಲಾಗಿದೆ. ಎಲ್ಲರನ್ನ ಗಮನಕ್ಕೆ ತೆಗೆದುಕೊಂಡು ಜಂಟಿ ಅಧಿವೇಶನದಲ್ಲಿ ವಿರೋಧ ಪಕ್ಷಗಳನ್ನ ಸಮರ್ಥವಾಗಿ ಎದುರಿಸಲು ಸಜ್ಜಾಗಲು ಸಿಎಂ ಬಿಎಸ್ವೈ ಪ್ಲಾನ್ ಮಾಡ್ತಿದ್ದಾರೆ.

ಪ್ರವಾಹ ಪರಿಹಾರ ಸಮರ್ಪಕವಾಗಿ ವಿತರಣೆ ಮಾಡಿಲ್ಲ ಅನ್ನೋ ಮಾತು, ಸಿಎಎ ವಿರೋಧಿ ಹೋರಾಟದಲ್ಲಿನ ಹಿಂಸಾಚಾರ, ಅಭಿವೃದ್ಧಿ ಕಾರ್ಯ ಕುಂಠಿತ ಸೇರಿದಂತೆ ಹಲವು ವಿಚಾರಗಳನ್ನ ಮುಂದಿಟ್ಟುಕೊಂಡು ಆಡಳಿತರೂಢ ಪಕ್ಷವನ್ನ ತರಾಟೆಗೆ ತೆಗೆದುಕೊಳ್ಳಲು ಇತ್ತ ಕಾಂಗ್ರೆಸ್-ಜೆಡಿಎಸ್ ಪ್ಲಾನ್ ಮಾಡಿವೆ. ಹೀಗಾಗಿ ಸಿಎಂಗೆ ಒಂದಿಷ್ಟು ಟೆನ್ಷನ್ ಶುರುವಾಗಿದೆ.




Leave a Reply

Your email address will not be published. Required fields are marked *

error: Content is protected !!