ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ನಾಳೆಯಿಂದ ರಾಜ್ಯ ವಿಧಾನಸಭೆ ಅಧಿವೇಶನ ಶುರುವಾಗಲಿದೆ. ಮುಂಗಾರು ಅಧಿವೇಶನ ಸೆಪ್ಟೆಂಬರ್ 21ರಿಂದ 30ರ ತನಕ ನಡೆಯಲಿದೆ. ಕರೋನಾ ಹಾವಳಿ ನಡುವೆ ಅಧಿವೇಶನ ನಡೆಯುತ್ತಿದ್ದು, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನ ತೆಗೆದುಕೊಳ್ಳಲಾಗಿದೆ.
ಸೆಪ್ಟೆಂಬರ್ 21ರ ಬೆಳಗ್ಗೆ 11 ಗಂಟೆಗೆ ಅಧಿವೇಶನ ಶುರುವಾಗಲಿದೆ. ಶನಿವಾರ ಹಾಗೂ ಭಾನುವಾರ ಸಹ ಈ ಭಾರಿ ಅಧಿವೇಶನ ನಡೆಯಲಿದೆ. ಸತತವಾಗಿ 8 ದಿನಗಳ ರಾಜ್ಯ ವಿಧಾನಸಭೆ ಅಧಿವೇಶನ ನಡೆಯಲಿದ್ದು, ಸರ್ಕಾರವನ್ನ ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷಗಳು ಸಜ್ಜಾಗಿವೆ.
ನೆರೆ ಪರಿಹಾರ, ಕೋವಿಡ್ ಕಿಟ್ ಅವ್ಯವಹಾರ, ಡ್ರಗ್ಸ್ ಕೇಸ್, ಕೆಜಿ ಹಳ್ಳಿ ಗಲಾಟೆ ಸೇರಿದಂತೆ ಹಲವು ವಿಚಾರಗಳನ್ನ ಮುಂದಿಟ್ಟುಕೊಂಡು ಸರ್ಕಾರವನ್ನ ತರಾಟೆಗೆ ತೆಗೆದುಕೊಳ್ಳಲು ಕಾಂಗ್ರೆಸ್, ಜೆಡಿಎಸ್ ಸಿದ್ಧವಾಗಿದ್ದು, ವಿರೋಧ ಪಕ್ಷಗಳಿಗೆ ಉತ್ತರ ನೀಡಲು ಸಿಎಂ ಬಿ.ಎಸ್ ಯಡಿಯೂರಪ್ಪ ಟೀಂ ಸಹ ಸಹಜ್ಜಾಗಿದೆ.