ಪ್ರಜಾಸ್ತ್ರ ಸುದ್ದಿ
ಹಾವೇರಿ: ಕಾಂಗ್ರೆಸ್ ನಿಂದ ಮತ್ತಷ್ಟು ಜನ ಬಿಜೆಪಿಗೆ ಬರುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ. ಕಾಂಗ್ರೆಸ್ ಗ್ಯಾರೆಂಟಿಗಿಂತ ಬಿಜೆಪಿ ಗ್ಯಾರೆಂಟಿ ಶ್ರೇಷ್ಠವಾಗಿದೆ. ಲೋಕಸಭೆ ಚುನಾವಣೆಯಲ್ಲಿ 28 ಸ್ಥಾನಗಳಲ್ಲಿ 28ರಲ್ಲೂ ಗೆಲ್ಲುತ್ತೇವೆ ಎಂದರು.
ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದೇನೆ. ಕಾರ್ಯಕರ್ತರು ಉತ್ಸಾಹದಲ್ಲಿದ್ದಾರೆ. ಪಂಚ ರಾಜ್ಯ ಚುನಾವಣೆಯ ಫಲಿತಾಂಶ ದೇಶದಲ್ಲಿ ಬಿಜೆಪಿ ಅಲೆ ಇರುವುದು ತೋರಿಸಿದೆ. ಹೀಗಾಗಿ ಕೇಂದ್ರದ ಯೋಜನೆಗಳನ್ನು ಮನೆ ಮನೆಗೆ ತಲುಪಿಸಬೇಕು ಎಂದು ಹೇಳಿದರು.