ತಿಕೋಟಾದಲ್ಲಿ ಹೃದಯ ವಿದ್ರಾವಕ ಘಟನೆ

332

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಮೂರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ‌ಜಿಲ್ಲೆ ತಿಕೋಟಾ ತಾಲೂಕಿನ ತೊರವಿ ತಾಂಡಾ 1 ರ ತೋಟದಲ್ಲಿ‌ ನಡೆದಿದೆ. ಈ ಹೃದಯ ವಿದ್ರಾವಕ ಘಟನೆ ಕಂಡು ಜನರು ಕಣ್ಣೀರು ಹಾಕುತ್ತಿದ್ದಾರೆ.

ಅನಿತಾ ಪಿಂಟು ಜಾಧವ್ (27), ಮಕ್ಕಳಾದ ಪ್ರವೀಣ (6) ಸುದೀಪ (4) ಮಮದಿಕಾ (2) ಎಂಬ ಮೂರು ಪುಟ್ಟ ಮಕ್ಕಳೊಂದಿಗೆ ಕೃಷಿ‌ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ದುರಂತ ಸಾವಿಗೆ ಕೌಟುಂಬಿಕ ಕಲಹವೆ ಕಾರಣವೆಂದು ಪೊಲೀಸರು ಶಂಕಿಸಿದ್ದಾರೆ. ಸ್ಥಳಕ್ಕೆ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದರು.




Leave a Reply

Your email address will not be published. Required fields are marked *

error: Content is protected !!