ಪ್ರಜಾಸ್ತ್ರ ಸುದ್ದಿ
ರಾಯಚೂರು: ನೂತನವಾಗಿ ರಾಜ್ಯಸಭೆಗೆ ಆಯ್ಕೆಯಾಗಿದ್ದ ಬಿಜೆಪಿಯ ಅಶೋಕ ಗಸ್ತಿ ನಿಧನರಾಗಿದ್ದಾರೆ. ರಾಯಚೂರು ಜಿಲ್ಲೆ ಲಿಂಗಸೂಗೂರು ತಾಲೂಕಿನವರಾದ ಅಶೋಕ ಗಸ್ತಿ ಕೋವಿಡ್ 19 ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಶೋಕ ಗಸ್ತಿ ಇಂದು ಮಧ್ಯಾಹ್ನ ನಿಧನ ಹೊಂದಿದ್ದಾರೆ. ಮೂರು ದಶಕಗಳಿಂದ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದ ಅಶೋಕ ಗಸ್ತಿ ಅವರಿಗೆ ರಾಜ್ಯಸಭಾ ಸದಸ್ಯ ಸ್ಥಾನ ಒಲಿದಿತ್ತು. ಪ್ರಮಾಣ ವಚನ ಸ್ವೀಕಾರ ಮಾಡಿದ ಅವರು, ಅಧಿವೇಶನಕ್ಕೆ ಹಾಜರಾಗುವ ಮೊದ್ಲೇ ಸಾವನ್ನಪ್ಪಿದ್ದಾರೆ.
ಅಶೋಕ ಗಸ್ತಿ ನಿಧನಕ್ಕೆ ಬಿಜೆಪಿ ನಾಯಕರು ಸೇರಿದಂತೆ ರಾಜ್ಯದ ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ. ಮೃತರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ.