ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಕೈ ತಪ್ಪಿರುವುದಿರಂದ ಅಸಮಾಧಾನಗೊಂಡಿರುವ ಹಾಲಿ ಬಿಜೆಪಿ ಸಂಸದ ಡಿ.ವಿ ಸದಾನಂದಗೌಡ ಗುರುವಾರ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದರು. ರಾಜ್ಯದಲ್ಲಿ ಬಿಜೆಪಿ ಕುಟುಂಬ, ಮಕ್ಕಳು, ಜಾತಿಗೆ ಸೀಮಿತ ಮಾಡಿದ್ದಾರೆ ಎಂದು ಕಿಡಿ ಕಾರಿದರು.
ಪಕ್ಷಕ್ಕಾಗಿ ದುಡಿದವರನ್ನು ಕಡೆಗಣಿಸಲಾಗಿದೆ. ಸರ್ವಾಧಿಕಾರ ರಾಜಕೀಯದಲ್ಲಿ ನಡೆಯುವುದಿಲ್ಲ. ಪಕ್ಷದಲ್ಲಿ ಒಂದಿಷ್ಟು ಜನ ಶುದ್ಧೀಕರಣ ಬಯಸುತ್ತಿದ್ದಾರೆ. ಚುನಾವಣೆ ಬಳಿಕ ಪಕ್ಷದಲ್ಲಿ ಶುದ್ಧೀಕರಣಕ್ಕೆ ವೇಗ ಕೊಡುತ್ತೇನೆ. ಬೆಂಗಳೂರು ಉತ್ತರ ಟಿಕೆಟ್ ಗಾಗಿ ನನ್ನೊಬ್ಬನ ಹೆಸರು ಇತ್ತು. 142 ಜನರು ನನ್ನ ಹೆಸರು ಆಯ್ಕೆ ಮಾಡಿದ್ದರು. ಕೇಂದ್ರದಲ್ಲಿ ಮಂಡನೆ ಮಾಡಲು ಆಗದಿದ್ದವರು ನಮ್ಮ ನಾಯಕರಲ್ಲ ಎಂದು ಪರೋಕ್ಷವಾಗಿ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದರು.
ನನ್ನನ್ನು ಚೆಂದ ಆರತಿ ಎತ್ತಿ ಬನ್ನಿ ಸ್ಪರ್ಧೆ ಮಾಡಿ ಎಂದು ಕರೆದರು. ಈಗ ಮಂಗಳಾರತಿ ಮಾಡಿ ಕಳಿಸಿದ್ದಾರೆ ಅಂತಾ ಆಕ್ರೋಶ ಹೊರ ಹಾಕಿದರು. ಕಾಂಗ್ರೆಸ್ ನಿಂದ ಆಹ್ವಾನ ಬಂದಿದ್ದು ನಿಜ. ಆದರೆ, ನಾನು ಕಾಂಗ್ರೆಸ್ ಸೇರಲ್ಲ ಎಂದು ಹೇಳಿದ್ದಾರೆ.