ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಹೊಂದಾಣಿಕೆ ಮಾಡಿಕೊಳ್ಳಲಿದೆ ಎಂದು ಎರಡು ಪಕ್ಷಗಳ ನಾಯಕರು ಹೇಳುತ್ತಿದ್ದಾರೆ. ಈ ಬಗ್ಗೆ ಬಿಜೆಪಿ ಮಾಜಿ ಸಿಎಂ ಯಡಿಯೂರಪ್ಪ ಬಹಿರಂಗ ಹೇಳಿಕೆ ನೀಡಿದ್ದರು. ಇದೀಗ ದಿಢೀರ್ ಎಂದು ಯೂ ಟರ್ನ್ ಹೊಡೆದಿದ್ದಾರೆ.
ಸಧ್ಯ ಜೆಡಿಎಸ್ ನೊಂದಿಗೆ ಮೈತ್ರಿ ಬಗ್ಗೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಪ್ರಧಾನಿ ಮೋದಿ ಬೇರೆ ಕೆಲಸದಲ್ಲಿ ಬ್ಯುಸಿ ಇದ್ದಾರೆ. ಇದುವರೆಗೂ ಯಾವುದೇ ಮಾತುಕತೆ ಆಗಿಲ್ಲ. ಹಿಂದೆ ನಾನು ಹೇಳಿದಾಗಲೂ ಒಂದು ರೂಪಕ್ಕೆ ಬಂದಿರ್ಲಿಲ್ಲ ಎಂದಿದ್ದಾರೆ. ಈ ಮೂಲಕ ತಮ್ಮ ಹೇಳಿಕೆಗೆ ತದ್ವಿರುದ್ಧವಾಗಿ ಮಾತನಾಡಿದ್ದಾರೆ.
ಜೆಡಿಎಸ್ ಬಿ ಟೀಂ ಅನ್ನೋದು ನಿವಾಗಿದೆ ಎಂದು ಹೇಳಿದ ಸಿಎಂ ಸಿದ್ದರಾಮಯ್ಯನವರ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ಅವರ ಹೇಳಿಕೆ ಬಗ್ಗೆ ನಾನು ಏನು ಮಾತನಾಡುವುದಿಲ್ಲ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ನಾನು ಇನ್ನು ಮಾತನಾಡಿಲ್ಲ ಎಂದಿದ್ದಾರೆ. ಬಿಎಸ್ವೈ ಈ ರೀತಿ ಎರಡು ರೀತಿಯ ಹೇಳಿಕೆ ಪಕ್ಷದ ನಾಯಕರಲ್ಲಿಯೇ ಗೊಂದಲ ಮೂಡಿಸಿದೆ.