ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಆನೆ ದಂತ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮಾಜಿ ಸಚಿವೆ, ಬಿಜೆಪಿ ಸಂಸದೆ ಮನೇಕಾ ಗಾಂಧಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಪತ್ರ ಬರೆದಿದ್ದಾರೆ. ಅರಣ್ಯ ಇಲಾಖೆಯ ಗಂಭೀರ ಪ್ರಕರಣ ಆರೋಪಿಗಳಿಬ್ಬರ ಪರ ಸಂಸದ ಪ್ರಜ್ವಲ್ ರೇವಣ್ಣ ನಿಂತಿದ್ದಾರೆ ಎಂದು ಮನೇಕಾ ಗಾಂಧಿ ಆರೋಪಿಸಿದ್ದಾರೆ.
ಹಾಸನ ತಾಲೂಕಿನ ವೀರಾಪುರ ಗ್ರಾಮದಲ್ಲಿ ಚಂದ್ರೇಗೌಡ ಹಾಗೂ ತಿಮ್ಮಯ್ಯ ಎಂಬುವರು ಅಕ್ರಮವಾಗಿ ವಿದ್ಯುತ್ ಹರಿಸಿ ಆನೆಯೊಂದನ್ನು ಕೊಂದು ಅದರ ದಂತಗಳನ್ನು ಮಾರಾಟ ಮಾಡುವ ವೇಳೆ ಕಳೆದ ಮಾರ್ಚ್ 19ರಂದು ಸಿಕ್ಕಿಬಿದ್ದಿದ್ದಾರೆ. ಆದರೆ, ಸಂಸದರ ಪಕ್ಷದ ಬೆಂಬಲಿಗರು ಅನ್ನೋ ಕಾರಣಕ್ಕೆ ಪೊಲೀಸರ ಮೇಲೆ ಒತ್ತಡ ಹೇರುತ್ತಿದ್ದಾರೆ. ಸಿಎಂ ಬೊಮ್ಮಾಯಿ ಮಧ್ಯಪ್ರವೇಶಿಸಿ ಸೂಕ್ತ ತನಿಖೆಯಾಗುವಂತೆ ನೋಡಿಕೊಳ್ಳಬೇಕು ಎಂದಿದ್ದಾರೆ.