ಹುಬ್ಬಳ್ಳಿ: ಮಹಾತ್ಮ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆ ಪರವಾಗಿ ಟ್ವೀಟ್ ಮಾಡಿರುವ ಸಂಸದ ನಳೀನ್ ಕುಮಾರ್ ಕಟೀಲ್ ಹಾಗೂ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ನಡೆ ಸರಿಯಲ್ಲ ಅಂತಾ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಈಗಾಗ್ಲೇ ಅವರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಎಚ್ಚರಿಕೆ ನೀಡಿದ್ದಾರೆ ಎಂದು ಬಿಎಸ್ ವೈ ಹುಬ್ಬಳ್ಳಿಯಲ್ಲಿ ಹೇಳಿದರು. ಪಕ್ಷದಲ್ಲಿ ಇರುವ ಯಾರೇ ಆಗಲಿ, ಪಕ್ಷದ ನೀತಿ, ನಿಲುವುಗಳಿಗೆ ತಮ್ಮ ಅಭಿಪ್ರಾಯ ಮಂಡನೆ ಮಾಡಬೇಕು. ಇದರ ಆಚೆ ಯಾರೂ ಹೋಗಬಾರದು ಎಂದು ಸಲಹೆ ನೀಡಿದರು.