ಪ್ರಜಾಸ್ತ್ರ ಸುದ್ದಿ
ಮೈಸೂರು: ರಾಜ್ಯದಲ್ಲಿ ಬಿಜೆಪಿ ಹೀನಾಯವಾಗಿ ಸೋತ ಹಿನ್ನಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊರ ಹಾಕುತ್ತಿದ್ದಾರೆ. ಹೀಗಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮಾಜಿ ಸಿಎಂ ಸದಾನಂದಗೌಡ ಅವರ ಬ್ಯಾನರ್ ಹಾಕಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಹೀಗೆ ಮಾಡಿದ ಕಾರ್ಯಕರ್ತರ ವಿರುದ್ಧ ಕೇಸ್ ಆಗಿದೆ. ಅವರ ಮೇಲೆ ಪೊಲೀಸರು ಕ್ರಮ ತೆಗೆದುಕೊಂಡಿರುವುದು ಸಖತ್ ಸುದ್ದಿಯಾಗಿದೆ.
ಇದರ ನಡುವೆ ಸಂಸದ ಪ್ರತಾಪ್ ಸಿಂಹ ಟ್ವೀಟ್ ಮೂಲಕ ಕಾರ್ಯಕರ್ತರಲ್ಲಿ ಕ್ಷಮೆ ಕೇಳಿದ್ದಾರೆ. ನಮ್ಮ ಪರವಾಗಿ ಮನೆ, ಮಠ ಬಿಟ್ಟು ಮತ ಕೇಳಲು, ಗೆದ್ದಾಗ ಸಂಭ್ರಮ ಪಡುವ ಕಾರ್ಯಕರ್ತರನಿಗೆ ಸೋತಾಗ ನಮ್ಮ ಮೇಲೆ ಸಿಟ್ಟನ್ನು ಹೊರಹಾಕುವ ಹಕ್ಕೂ ಇರುತ್ತದೆ. ದಯವಿಟ್ಟು ನಮ್ಮನ್ನು ಕ್ಷಮಿಸಿ ಎಂದಿದ್ದಾರೆ. ಈ ಮೂಲಕ ಕಾರ್ಯಕರ್ತರ ಮೇಲೆ ದಾಖಲಾದ ಪ್ರಕರಣ ಸಂಬಂಧ ಪರೋಕ್ಷವಾಗಿ ಬಿಜೆಪಿ ನಾಯಕರ ವಿರುದ್ಧ ಕಿಡಿ ಕಾರಿದ್ದಾರೆ.