ನನ್ನ ಬಂಧನದ ಹಿಂದೆ ಪಿತೂರಿ: ಪ್ರತಾಪ್ ಸಿಂಹ ಸಹೋದರ

170

ಪ್ರಜಾಸ್ತ್ರ ಸುದ್ದಿ

ಹಾಸನ: ಮರಗಳ ಮಾರಣಹೋಮ ಆರೋಪಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಲೋಕಸಭಾ ಸದಸ್ಯ ಪ್ರತಾಪ್ ಸಿಂಹ್ ಸಹೋದರ ವಿಕ್ರಮರನ್ನು, ಹಾಸನ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪೊಲೀಸ್ ಠಾಣೆಗೆ ಕರೆದುಕೊಂಡು ಬಂದ ವೇಳೆ ಮಾತನಾಡಿದ ಅವರು, ನನ್ನನ್ನು ಅನಾವಶ್ಯಕವಾಗಿ ಟಾರ್ಗೆಟ್ ಮಾಡಲಾಗುತ್ತಿದೆ. ಇದರ ಹಿಂದೆ ವ್ಯವಸ್ಥಿತ ಪಿತೂರಿ ಇದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಎಲ್ಲವನ್ನೂ ಹೇಳುತ್ತೇನೆ ಎಂದಿದ್ದಾರೆ.

ಹಾಸನ ಜಿಲ್ಲೆ ಬೇಲೂರು ತಾಲೂಕಿನ ನಂದನಗೊಂಡಹಳ್ಳಿಯಲ್ಲಿ ವಿಕ್ರಮ್ ಸಿಂಹ ಕೋಟ್ಯಾಂತರ ರೂಪಾಯಿ ಮೌಲ್ಯದ 126 ಮರಗಳ ಮಾರಣಹೋಮ ನಡೆಸಿದ್ದಾರೆ ಎನ್ನುವ ಆರೋಪವಿದೆ. ನಿನ್ನೆ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದರು. ಇಂದು ಹೆಚ್ಚಿನ ವಿಚಾರಣೆಗಾಗಿ ಠಾಣೆಗೆ ಕರೆದುಕೊಂಡು ಬರಲಾಗಿದೆ.




Leave a Reply

Your email address will not be published. Required fields are marked *

error: Content is protected !!