ಪ್ರಜಾಸ್ತ್ರ ಸುದ್ದಿ
ಮೈಸೂರು: ಹಿರಿಯ ರಾಜಕಾರಣಿ, ಸಂಸದ ಶ್ರೀನಿವಾಸ ಪ್ರಸಾದ ಸಕ್ರಿಯ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತ್ನಾಡಿದ ಅವರು, ಸಂತೃಪ್ತಿಯಿಂದ ಸಕ್ರಿಯ ರಾಜಕೀಯಕ್ಕೆ ನಿವೃತ್ತಿ ಘೋಷಿಸುತ್ತಿದ್ದೇನೆ. ಮತ್ತೆ ಸ್ಪರ್ಧೆ ಮಾಡುವುದಿಲ್ಲವೆಂದರು.
ಕಳೆದ ನಾಲ್ಕು ವರ್ಷಗಳ ಹಿಂದೆಯೇ ನಾನು ರಾಜಕೀಯ ನಿವೃತ್ತಿ ಬಯಸಿದ್ದೆ. ಆದ್ರೆ, ರಾಜಕೀಯ ಬೆಳವಣಿಗೆಯಿಂದ ಸ್ಪರ್ಧೆ ಮಾಡಬೇಕಾಯ್ತು ಎಂದು ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ ಹೇಳಿದ್ದಾರೆ. ಮೂಲ ಕಾಂಗ್ರೆಸ್ ನಿಂದ ಬಂದ ಶ್ರೀನಿವಾಸ ಪ್ರಸಾದ, ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿಗೆ ಬಂದು ಸ್ಪರ್ಧಿಸಿ ಗೆಲುವು ಸಾಧಿಸಿದರು.