‘ಅಂಬಿ ಸ್ಮಾರಕ ವಿಚಾರಕ್ಕೆ ಹೋದವರ ಮುಖಕ್ಕೆ ಪೇಪರ್ ಎಸೆದಿದ್ದರು’

240

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸಂಸದೆ ಸುಮಲತಾ ಅಂಬರೀಶ ಹಾಗೂ ಜೆಡಿಎಸ್ ನಾಯಕರ ನಡುವಿನ ಸಮರ ಸಧ್ಯಕ್ಕೆ ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ. ಇವತ್ತು ಸಂಸದೆ ಮತ್ತೆ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಅಂಬಿ ಸ್ಮಾರಕ ವಿಚಾರಕ್ಕೆ ಸಂಬಂಧಿಸಿದಂತೆ ಮಾತ್ನಾಡಲು ಹೋದ ದೊಡ್ಡಣ್ಣ ಹಾಗೂ ಶಿವರಾಮಣ್ಣನವರನ್ನ ಕಾಯಿಸಿ ಏಕವಚನದಲ್ಲಿ ಬೈದು ಮುಖಕ್ಕೆ ಪೇಪರ್ ಎಸೆದು ಇದೆ ಕುಮಾರಸ್ವಾಮಿ ಅವಮಾನ ಮಾಡಿದ್ದಾರೆ. ಈ ಬಗ್ಗೆ ನಾನು ಆದಿಚುಂಚನಗಿರಿ ಶ್ರೀಗಳ ಬಳಿ ನೋವು ತೋಡಿಕೊಂಡಿದ್ದೆ ಎಂದು ಸಂಸದೆ ಸುಮಲತಾ ಹೇಳಿದ್ದಾರೆ.

ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ನನ್ನ ಹಾಗೂ ಆದಿಚುಂಚನಗಿರಿ ಶ್ರೀಗಳ ಫೋನ್ ಟ್ಯಾಪ್ ಆಗಿತ್ತು. ಆ ಮಹಾನಭಾವರ ಹೆಸರನ್ನ ಇಲ್ಲಿ ಪ್ರಸ್ತಾಪ ಮಾಡಬಾರದು. ಆದ್ರೆ, ಇವರು ಮಾಡುತ್ತಿರುವ ಅಕ್ರಮ ಹಾಗೂ ಹೇಳುತ್ತಿರುವ ಸುಳ್ಳುಗಳಿಂದ ಫೋನ್ ಟ್ಯಾಪಿಂಗ್ ಮಾತ್ನಾಡಬೇಕಾಯ್ತು ಎಂದು ಕಿಡಿ ಕಾರಿದ್ದಾರೆ.




Leave a Reply

Your email address will not be published. Required fields are marked *

error: Content is protected !!